ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಶಾಸಕ ಕೆ.ಅನ್ನದಾನಿ ಅವರು ಗಗನಚುಕ್ಕಿ ಜಲಪಾತೋತ್ಸವಕ್ಕೆ ತಡೆ ನೀಡುವ ಯಾವುದೇ ಉದ್ದೇಶ ಹೊಂದಿಲ್ಲ. ಬದಲಾಗಿ ಸಂಕಷ್ಟದಲ್ಲಿ ಇರುವ ತಾಲೂಕಿನ ರೈತರ ವ್ಯವಸಾಯಕ್ಕೆ ನೀರು ನೀಡಿ ಎಂದಿದ್ದಾರೆ. ಆದರೆ, ಇವರ ಹೇಳಿಕೆ ತಿರುಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಆರೋಪಿಸಿದರು.
ಮಳವಳ್ಳಿ ಕೊನೆಯ ಭಾಗಕ್ಕೆ ಕಾವೇರಿ ನೀರು ತಲುಪದೇ ಇಂದಿಗೂ ಭತ್ತದ ನಾಟಿ ಮುಗಿದಿಲ್ಲ. ತಾಲೂಕಿನ ರೈತರಿಗೆ ನೀರು ಕೊಟ್ಟು ವ್ಯವಸಾಯಕ್ಕೆ ಅನುವು ಮಾಡಿಕೊಡಬೇಕೆಂದು ಮಾಜಿ ಶಾಸಕರು ಒತ್ತಾಯ ಮಾಡಿದ್ದಾರೆ ಅಷ್ಟೆ ಎಂದರು.ಕೆ.ಅನ್ನದಾನಿ ಅವರು ನೀರಿನ ಬಗ್ಗೆ ಪ್ರಶ್ನೆ ಮಾಡಿದ ಮೇಲೆ ಶಾಸಕರು ನಾಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ನಾಲೆ ಆಧುನೀಕರಣದ ಹೆಸರಿನಲ್ಲಿ ರೈತರ ಶೋಷಣೆ ಮಾಡಲಾಗುತ್ತಿದೆ ಎಂದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೆ.ಅನ್ನದಾನಿ ವಿಶ್ವಾಸದಲ್ಲಿದ್ದು, ನಮ್ಮ ಪಕ್ಷದ ಬಗ್ಗೆ ಕಾಂಗ್ರೆಸ್ ನವರಿಗೆ ಚಿಂತನೆ ಬೇಡ ಎಂದು ಕಾಂಗ್ರೆಸ್ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿದರು.
ನಾಲಾ ಆಧುನೀಕರಣದ ಜವಾಬ್ದಾರಿ ಹೊತ್ತ ವ್ಯಕ್ತಿ ಮೇಲೆ ಕ್ರಮವಾಗಿಲ್ಲ. ಅಲ್ಲದೇ ರೈತರಿಗೆ ಆಗಿರುವ ನಷ್ಟದ ಬಗ್ಗೆ ಸಮಿತಿ ರಚಿಸಿ ತನಿಖೆ ನಡೆಸಬೇಕು. ಸುಮ್ಮನೆ ಕೆ.ಅನ್ನದಾನಿ ಅವರ ಬಗ್ಗೆ ಟೀಕೆ ಮಾಡಬಾರದು. ಪ್ರವಾಸಿ ಮಂದಿರ ಉಳಿದು ಅವರೇನು ಅಕ್ರಮ ಮಾಡಿದ್ದಾರೆ ಎಂಬ ಬಗ್ಗೆ ದಾಖಲೆ ನೀಡಲಿ. ಇಲ್ಲದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.