ಸಂವಿಧಾನ ಜಾಗೃತಿ ಜಾಥಾ ಯಶಸ್ವಿ: ಪಂಜಿನ ಮೆರವಣಿಗೆ, ಮಾನವ ಪರಪಳಿ
ಕನ್ನಡಪ್ರಭ ವಾರ್ತೆ, ತರೀಕೆರೆಸಂವಿಧಾನದ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಹೇಳಿದ್ದಾರೆ.
ತಾಲೂಕು ಅಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸಂವಿಧಾನ ಜಾಗೃತಿ ಜಾಥದ ಸಂದರ್ಭದಲ್ಲಿ ಏರ್ಪಡಿಸಿದ್ದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.ಸಮಾನತೆಯಿಂದ ಬದುಕುವುದಕ್ಕೆ ಕಾರಣ ಸಂವಿಧಾನ. ಬಹು ದೊಡ್ಡ ರಾಷ್ಟ್ರ ಭಾರತ, ಸಂವಿಧಾನದಲ್ಲಿ ಮೂಲಬೂತ ಕರ್ತವ್ಯ ಹಕ್ಕು ಎರಡು ಇರುತ್ತದೆ. ಸಂವಿಧಾನ ನಮ್ಮ ಹೆಮ್ಮೆಯಾಗಿದೆ, ಸರ್ವಕಾಲಿಕ ಸತ್ಯವನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿದ್ದು ಜಿಲ್ಲೆಯಲ್ಲಿ ತರೀಕೆರೆ ತಾಲೂಕು ಪ್ರಥಮ ಸ್ಥಾನದಲ್ಲಿದೆ. ಸಂವಿಧಾನ ಜಾಥಾ ಯಶಸ್ವಿಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಪುರಸಭೆ ಅಧ್ಯಕ್ಷ ಪರಮೇಶ್ ಮಾತನಾಡಿ, ಎಲ್ಲರೂ ಸಮಾನತೆಯಿಂದ ಬಾಳಬೇಕು ಎಂದು ಹೇಳಿದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಕಟೇಶ್ ಮಾತನಾಡಿ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನತೆ ತೋರಿಸಲಾಗಿದೆ. ಸಂವಿಧಾನದಲ್ಲಿ ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದಾರೆ ಎಂದು ಹೇಳಿದರು.
ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮಾತನಾಡಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿದೆ ಎಂದರು.ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಸಂವಿಧಾನದ ಮಹತ್ವ ಕೋಟ್ಯಾಂತರ ಜನರನ್ನು ತಲುಪಿದೆ ಎಂದು ಹೇಳಿದರು.ತಾಲೂಕು ಕಚೇರಿಯಿಂದ ಮಹಾತ್ಮಾಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಂತರ, ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ಏರ್ಪಡಿಸಲಾಗಿತ್ತು.ತಹಸೀಲ್ದಾರ್ ವಿ.ಎಸ್.ರಾಜೀವ್, ಪೌರಕಾರ್ಮಿಕರು, ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.24ಕೆಟಿಆರ್.ಕೆ.4ಃ
ತರೀಕೆರೆಯಲ್ಲಿ ತಾಲೂಕು ಅಡಳಿತ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಂವಿಧಾನ ಜಾಗೃತಿ ಜಾಥ ಯಶಸ್ವಿ ಸಂದರ್ಭದಲ್ಲಿ ಪಂಜಿನ ಮೆರವಣಿಗೆ ಏರ್ಪಡಿಸಲಾಗಿತ್ತು. ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್, ತಹಸೀಲ್ದಾರ್ ವಿ.ಎಸ್.ರಾಜೀವ್, ಪುರಸಭೆ ಅಧ್ಯಕ್ಷ ಪರಮೇಶ್ ಮತ್ತಿತರರು ಇದ್ದಾರೆ.