ಕನ್ನಡಪ್ರಭ ವಾರ್ತೆ ಮೈಸೂರು
ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಆರ್ ಬೈಟಲ್ ಅಥೆರೆಕ್ಟಮಿ ಚಿಕಿತ್ಸೆಗೆ ಒಳಗಾದ ತಾಲೂಕಿನ ಉತ್ತನಹಳ್ಳಿಯ 50 ವರ್ಷದ ಪುಟ್ಟಸ್ವಾಮಿ ಅವರಿಗೆ ಆಸ್ಪತ್ರೆಯ ವೈದ್ಯ ಡಾ.ಬಿ. ದಿನೇಶ್ ನೇತೃತ್ವದ ತಂಡ ಯಶಸ್ವಿಯಾಗಿ ಚಿಕಿತ್ಸೆ ನಡೆಸಿದೆ ಎಂದರು.
ಹೃದಯದ ರಕ್ತನಾಳದಲ್ಲಿ ತುಂಬಾ ಕ್ಯಾಲ್ಸಿಯಂ ಇದ್ದರೆ ಈ ಹಿಂದೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡುತ್ತಿದ್ದೆವು. ಈಗ ರಕ್ತನಾಳದ ಕ್ಯಾಲ್ಸಿಯಂ ಅನ್ನು ಪುಡಿಪುಡಿ ಮಾಡಿ ಸ್ಟಂಟ್ ಹಾಕುವ ವಿಧಾನವಾಗಿದೆ. ಈ ವಿಧಾನದಿಂದ ರಕ್ತನಾಳಕ್ಕೆ ಅಪಾಯ ಕಡಿಮೆ ಇದ್ದು, ಇದರ ವೆಚ್ಚ ಸುಮಾರು 2.5 ಲಕ್ಷ ಆಗುತ್ತದೆ ಎಂದರು.ಡಾ.ಬಿ. ದಿನೇಶ್ ಮಾತನಾಡಿ, ರೋಗಿಗೆ ಬೈಪಾಸ್ ಮಾಡಲು ರಕ್ತನಾಳಗಳು ಸೂಕ್ತವಿಲ್ಲದ ಕಾರಣ ಆರ್ ಬೈಟಲ್ ಅಥೆರೆಕ್ಟಮಿ ವಿಧಾನದಿಂದ ರಕ್ತ ನಾಳದಲ್ಲಿರುವ ಕ್ಯಾಲ್ಸಿಯಂ ಫ್ಯಾಟ್ ತೆಗೆದು ರಕ್ತನಾಳವನ್ನು ಶುದ್ಧೀಕರಿಸಿ ನಂತರ ಸ್ಟಂಟ್ ಅಳವಡಿಸಲಾಗುತ್ತದೆ. ರಕ್ತನಾಳದಲ್ಲಿ ಯಾವುದೇ ತರನಾದ ತಿರುವುಗಳಿದ್ದರೂ ಕೂಡ ಈ ಚಿಕಿತ್ಸೆ ಮಾಡಬಹುದು. ಇದರಿಂದ ರೋಗಿಗೆ ಯಾವುದೇ ತೊಂದರೆಯಾಗುವುದಿಲ್ಲ. ಶಸ್ತ್ರ ಚಿಕಿತ್ಸೆ ಆದ ನಂತರ ಮೂರೇ ದಿನದಲ್ಲಿ ರೋಗಿಯನ್ನು ಮನೆಗೆ ಕಳುಹಿಸಬಹುದು ಎಂದರು.