ಸಾಹಿತ್ಯ ಕ್ಷೇತ್ರಕ್ಕೆ ಡಾ.ಕವಿತಾಕೃಷ್ಣರ ಕೊಡುಗೆ ಅಪಾರ

KannadaprabhaNewsNetwork |  
Published : Feb 05, 2025, 12:34 AM IST

ಸಾರಾಂಶ

ತಮ್ಮ ಜೀವಿತಾವಧಿಯ ಕೊನೆಯವರೆಗೂ ಸಾಹಿತಿ ಡಾ.ಕವಿತಾ ಕೃಷ್ಣ ಅವರು ನಿರಂತರ ಸಾಹಿತ್ಯ ಕೃಷಿ ಮಾಡಿ ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕೃತಿಗಳು ಸಾಹಿತ್ಯ ಪೇಮಿಗಳೊಂದಿಗೆ ಸದಾ ಜೀವಂತವಾಗಿವೆ ಎಂದು ಪಾವಗಡ ರಾಮಕೃಷ್ಣಾಶ್ರಮದ ಡಾ.ಜಪಾನಂದ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರುತಮ್ಮ ಜೀವಿತಾವಧಿಯ ಕೊನೆಯವರೆಗೂ ಸಾಹಿತಿ ಡಾ.ಕವಿತಾ ಕೃಷ್ಣ ಅವರು ನಿರಂತರ ಸಾಹಿತ್ಯ ಕೃಷಿ ಮಾಡಿ ಕನ್ನಡ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕೃತಿಗಳು ಸಾಹಿತ್ಯ ಪೇಮಿಗಳೊಂದಿಗೆ ಸದಾ ಜೀವಂತವಾಗಿವೆ ಎಂದು ಪಾವಗಡ ರಾಮಕೃಷ್ಣಾಶ್ರಮದ ಡಾ.ಜಪಾನಂದ ಸ್ವಾಮೀಜಿ ಹೇಳಿದರು.ತಾಲೂಕಿನ ಕೌತಮಾರನಹಳ್ಳಿಯ ಆಕಾಶ್ ಫಾರಂನಲ್ಲಿ ಡಾ.ಕವಿತಾಕೃಷ್ಣ ಸಾಹಿತ್ಯ ಮಂದಿರ ಹಾಗೂ ಕವಿತಾಕೃಷ್ಣ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ನುಡಿನಮನ ಹಾಗೂ ಸಾಹಿತ್ಯ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಾ.ಕವಿತಾ ಕೃಷ್ಣರೊಂದಿಗಿನ ತಮ್ಮ ಒಡನಾಟ ಸ್ಮರಿಸಿಕೊಂಡರು.ಕವಿತಾಕೃಷ್ಣ ಅವರು ವಿವಿಧ ಸಾಹಿತ್ಯದ ಸುಮಾರು 200 ಕೃತಿಗಳನ್ನು ರಚಿಸಿದ್ದಾರೆ. ಅಷ್ಟು ಕೃತಿಗಳನ್ನು ರಚಿಸುವುದು ಸುಲಭವಾದ ವಿಚಾರವಲ್ಲ. ಅವರಿಗಿದ್ದ ಸಾಹಿತ್ಯ ಜ್ಞಾನ, ಬರವಣಿಗೆ ಸಾಮರ್ಥ್ಯದಿಂದ ಅದು ಸಾಧ್ಯವಾಗಿದೆ. ಕನ್ನಡ ಸಾಹಿತ್ಯ ವಲಯದಲ್ಲಿ ಅಜರಾಮರಾಗಿದ್ದಾರೆ. ಅವರ ಸಾಹಿತ್ಯ ಸೇವೆಯನ್ನು ಜಿಲ್ಲೆಯ ಜನ ಸದಾ ಸ್ಮರಿಸಬೇಕು ಎಂದು ಹೇಳಿದರು. ಕವಿತಾಕೃಷ್ಣ ಸಾಹಿತ್ಯ ಮಂದಿರ ಹಾಗೂ ಅಭಿಮಾನಿಗಳು ಕವಿತಾಕೃಷ್ಣರ ಹೆಸರಿನಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಮುಂದುವರೆಸಿ ಅವರ ಕೊಡುಗೆ ಗೌರವಿಸಿ, ಸಾಹಿತ್ಯ ಸೇವೆ ಮುಂದುವರೆಸಬೇಕು ಎಂದು ಸ್ವಾಮೀಜಿ ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಮಾತನಾಡಿ, ಡಾ.ಕವಿತಾಕೃಷ್ಣ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪರಿಷತ್ತಿನೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಅವರ ನಿರಂತರ ಸಾಹಿತ್ಯ ಕೃಷಿ, ಅವರಿಗಿದ್ದ ಸಾಹಿತ್ಯ ಪ್ರೇಮ ಹಲವರು ಸಾಹಿತ್ಯ ಕೃಷಿಯಲ್ಲಿ ತೊಡಗಲು ಕವಿತಾಕೃಷ್ಣ ಪ್ರೇರಣೆಯಾಗಿದ್ದರು ಎಂದು ಹೇಳಿದರು.ಜಿಲ್ಲಾ ಕನ್ನಡ ಸೇನೆ ಅಧ್ಯತಕ್ಷ ಧನಿಯಾಕುಮಾರ್ ಮಾತನಾಡಿ, ಡಾ.ಕವಿತಾಕೃಷ್ಣ ಅವರು ಶ್ರೇಷ್ಠ ಸಾಹಿತಿ ಮಾತ್ರವಲ್ಲದೆ ಅಪ್ರತಿಮ ಕನ್ನಡ ಹೋರಾಟಗಾರರೂ ಆಗಿದ್ದರು. ಕನ್ನಡ ಸೇನೆಯ ಜಿಲ್ಲಾ ಗೌರವಾಧ್ಯಕ್ಷರೂ ಆಗಿದ್ದ ಅವರು ಅನೇಕ ಕನ್ನಡಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂದರು.ಕವಿತಾಕೃಷ್ಣ ಅವರು ಸಾಹಿತ್ಯ ಸೇವೆ ಚಿರಸ್ಥಾಯಿಯಾಗಬೇಕು. ಅವರ ಹೆಸರಿನಲ್ಲಿ ಜಿಲ್ಲಾಡಳಿತ ಗ್ರಂಥಾಲಯ ಸ್ಥಾಪಿಸಬೇಕು. ಕ್ಯಾತ್ಸಂದ್ರದ ಪ್ರಮುಖ ವೃತ್ತಕ್ಕೆ ಕವಿತಾಕೃಷ್ಣರ ಹೆಸರು ಇಡಬೇಕು. ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ ಪ್ರತಿ ವರ್ಷ ಸಾಹಿತ್ಯ ಸಾಧಕರಿಗೆ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದರು.ಕವಿತಾಕೃಷ್ಣ ಅವರ ಪತ್ನಿ ರತ್ನಮ್ಮ, ಪುತ್ರ ಅರವಿಂದಕೃಷ್ಣ, ಲೇಖಕಿ ಕಮಲಾ ಬಡ್ಡಿಹಳ್ಳಿ, ಪರಿಮಳಾ ಸತೀಶ್ ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವ ಶಾಸಕರೂ ನನ್ನ ಪರ ದೆಹಲಿಗೆ ಹೋಗಬೇಡಿ: ಡಿಕೆ ಶಿವಕುಮಾರ್‌
91ಲಕ್ಷ ಕನ್ನ ಹಾಕಿದವರ ಸುಳಿವು ನೀಡಿದ ಬ್ಯಾಗ್‌