ಕನ್ನಡಪ್ರಭ ವಾರ್ತೆ ಕಲಬುರಗಿ
ಏತನ್ಮದ್ಯೆ ಸೋಮವಾರ ಕಲಬುರಗಿ ಪ್ರವಾಸದಲ್ಲಿರುವ ಡಾ. ಖರ್ಗೆಯವರ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ತಂದೆಯವರಾದ ಡಾ. ಮಲ್ಲಿಕಾರ್ಜುನ ಖರ್ಗೆಯವರು ಮುಂದಿನ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮರ್ಥರಿದ್ದಾರೆಂದು ಉತ್ತರಿಸುವ ಮೂಲಕ ರಾಜಕೀಯವಾಗಿ ಗಮನ ಸೆಳೆದಿದ್ದಾರೆ.
ರಾಜ್ಯಸಭಾ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ತಮಗೆ ಸಿಎಂ ಕುರ್ಚಿ ಕೈತಪ್ಪಿದ್ದಕ್ಕೆ ವಿಷಾದಿಸಿಲ್ಲ, ಖರ್ಗೆಯವರು ಆಡಿರುವ ಮಾತಿನ ಸಂಪೂರ್ಣ ವಿಡಿಯೋ ನೋಡಿದಾಗ ಮಾತ್ರ ಅವರ ಮಾತಿನ ಅರ್ಥ ಆಗುತ್ತದೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಕಲಬುರಗಿ, ಬೀದರ್ನ ಹಳ್ಳಿಯಿಂದ ದಿಲ್ಲಿಯವರೆಗೆ ಅವರು ಮುಟ್ಟಿದ್ದಾರೆ ಎಂದರು.ಅವರ ಮುಂದಿನ ರಾಜಕೀಯ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅವರ ನಿರ್ಧಾರವನ್ನು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡಾ ಗೌರವಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಅನುದಾನ ಬೇರೆಡೆ ತಿರುಗಿಸಿದ್ದರೆ ಬಿಜೆಪಿ ದಾಖಲೆ ನೀಡಲಿ:
ರಣದೀಪ್ ಸುರ್ಜೆವಾಲ ಅವರು ಸಚಿವರ ಸಭೆ ಕರೆದಿರುವುದಕ್ಕೆ ಬಿ.ಎಲ್. ಸಂತೋಷ ಆಕ್ಷೇಪ ವ್ಯಕ್ತಪಡಿಸಿರುವುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸುರ್ಜೆವಾಲ ಬದಲಿಗೆ ದತ್ತಾತ್ರೇಯ ಹೊಸಬಾಳೆ ಅಥವಾ ಸಂತೋಷ್ ಸಭೆ ತೆಗೆದುಕೊಳ್ಳಬೇಕೇ ? ಎಂದು ಪ್ರಶ್ನಿಸಿದರು.
ಕೇಂದ್ರೀಯ ವಿವಿಗಳು ಆರ್ ಎಸ್ ಎಸ್ ಶಾಖೆಗಳಾಗಿವೆ:
ಚುನಾವಣೆಯಲ್ಲಿ ಅಕ್ರಮ:
ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಯೋಗ್ಯ ಪದ ಬಳಸಿದ್ದಕ್ಕೆ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ದಾಖಲಾದ ಎಫ್ ಐ ಆರ್ ಅನ್ನು ಸುಪ್ರೀಂ ಕೊರ್ಟ್ ರದ್ದು ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಡಿಗೆ ಭಾಷಣಕಾರರ ಬಗ್ಗೆಯಾಗಲೀ, ಅವರ ಬಾಸ್ ಗಳ ಬಗ್ಗೆಯಾಗಲೀ ನಾನೇನು ಉತ್ತರಿಸಲಿ ?. ನಾನು ಯಾವುದಾದರೂ ಎಫ್ ಐ ಆರ್ ಹಾಕಿದ್ದರೆ ತೋರಿಸಲಿ. ಯಾರೋ ಒಬ್ಬರು ಅಲ್ಲಿನ ಸ್ಥಳೀಯ ನಾಯಕರು ಹಾಕಿದ್ದರೆ ಅದಕ್ಕೆ ನಾನೇನು ಹೇಳಲಿ? ಎಂದು ಮರುತ್ತರ ನೀಡಿದರು.
ಇಂದಿರಾ ಮಾಡಿದ ಅರ್ಧ ಕೆಲಸವನ್ನಾದರೂ ಮೋದಿ ಮಾಡಲಿ
ಮೋದಿ ಅವರು ಹೆಚ್ಚಿನ ಅವಧಿಯಲ್ಲಿ ಪ್ರಧಾನಿಯಾಗುವ ಮೂಲಕ ಇಂದಿರಾಗಾಂಧಿ ಅವರ ದಾಖಲೆ ಮುರಿದಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದರ ಸಚಿವರು, ಇಂದಿರಾಗಾಂಧಿ ಮಾಡಿದ ಕೆಲಸದಲ್ಲಿ ಅರ್ಧದಷ್ಟಾದರೂ ಕೆಲಸವನ್ನು ಮೋದಿ ಮಾಡಿ ತೋರಿಸಲಿ. ಇಂದಿರಾಗಾಂಧಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಭೂಮಿ ಉಳುಮೆಗೆ ತಂದ ಸುಧಾರಣೆ ಹಾಗೂ ಪಾಕಿಸ್ತಾನ ವನ್ನು ಎರಡು ಭಾಗ ಮಾಡಿದ್ದು ಸೇರಿದಂತೆ ಹಲವಾರು ಕ್ರಾಂತಿಕಾರಿ ಬದಲಾವಣೆ ಮಾಡಿದ್ದಾರೆ. ಇಂದಿರಾಗಾಂಧಿ ಅವರು 44 ಬಾರಿ ಪತ್ರಿಕಾಗೋಷ್ಠಿ ಮಾಡಿದ್ದಾರೆ ಇವರೇನು ಮಾಡಿದ್ದಾರೆ? ಮೊನ್ನೆ ರಾಹುಲ್ ಗಾಂಧಿ ಹೇಳಿದಂತೆ ಮೋದಿಯವರ ಬಗ್ಗೆ ಕೆಲ ಮೀಡಿಯಾಗಳು ಹೈಪ್ ಮಾಡುತ್ತಿದ್ದಾರೆ ಅಷ್ಟೇ, ಎಂದು ವಾಗ್ದಾಳಿ ನಡೆಸಿದರು.