ಡಾ.ಕೆ.ವೈ.ಶ್ರೀನಿವಾಸ್ ಮಂಡ್ಯ ಜಿಲ್ಲೆ ಕಂಡ ಅಪ್ರತಿಮ ವೈದ್ಯ: ಧನ್ಯಕುಮಾರ್

KannadaprabhaNewsNetwork |  
Published : Feb 08, 2026, 01:45 AM IST
8ಕೆಎಂಎನ್ ಡಿ12 | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಈಚೆಗೆ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿರುವುದು ನೋವಿನ ಸಂಗತಿ. ಆದರೆ, ಬದ್ಧತೆಯಿಂದ ಕೆಲಸ ಮಾಡಿದರೆ ಸರ್ಕಾರಿ ಶಾಲೆಗಳು ಉದ್ಧಾರವಾಗುತ್ತವೆ ಎಂಬುದಕ್ಕೆ ಪಾಂಡವಪುರ ಫ್ರೆಂಚ್ ರಾಕ್ಸ್ ಶತಮಾನ ಸರ್ಕಾರಿ ಶಾಲೆ ಸೂಕ್ತ ಉದಾಹರಣೆ.

ಪಾಂಡವಪುರ:

ತಮ್ಮ ಜೀವನದುದ್ದಕ್ಕೂ ಸಮಾಜ ಸೇವೆ ಮಾಡುತ್ತಾ ಬಂದಿದ್ದ ದಿ.ಡಾ.ಕೆ.ವೈ.ಶ್ರೀನಿವಾಸ್ ಅವರು ಜಿಲ್ಲೆ ಕಂಡ ಅಪ್ರತಿಮ ವೈದ್ಯ ಹಾಗೂ ಸಮಾಜ ಸೇವಕರು ಎಂದು ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್ ಹೇಳಿದರು.

ಪಟ್ಟಣದ ಹಾರೋಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾಜ ಸೇವಕ, ವೈದ್ಯರಾದ ಡಾ.ಕೆ.ವೈ.ಶ್ರೀನಿವಾಸ್ ಅವರ ಸವಿ ನೆನಪಿಗಾಗಿ ಶಾಲಾ ಮಕ್ಕಳಿಗೆ ಇಂಗ್ಲಿಷ್ ನಿಘಂಟು ವಿತರಿಸಿ ಮಾತನಾಡಿದರು.

ಡಾ.ಕೆ.ವೈ.ಶ್ರೀನಿವಾಸ್ ಅವರು ಕ್ರೀಡೆ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದಾರೆ. ಜೊತೆ ಜೊತೆಯಲ್ಲೇ ಸಮಾಜ ಸೇವೆಗೂ ತಮ್ಮ ಇಡೀ ಜೀವಮಾನವನ್ನು ಮುಡಿಪಾಗಿಟ್ಟಿದ್ದರು. ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ 75 ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಬೇಕೆಂಬುದು ಅವರ ಬಯಕೆಯಾಗಿತ್ತು. ಇದೀಗ ಅವರ ಪುತ್ರ ಡಾ.ಕೆ.ಎಸ್.ಅಭಿನಯ್ ಡಾ.ಶ್ರೀನಿವಾಸ್ ಅವರ ಬಯಕೆ ಈಡೇರಿಸಲು ಮುಂದಾಗಿದ್ದಾರೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಈಚೆಗೆ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿರುವುದು ನೋವಿನ ಸಂಗತಿ. ಆದರೆ, ಬದ್ಧತೆಯಿಂದ ಕೆಲಸ ಮಾಡಿದರೆ ಸರ್ಕಾರಿ ಶಾಲೆಗಳು ಉದ್ಧಾರವಾಗುತ್ತವೆ ಎಂಬುದಕ್ಕೆ ಪಾಂಡವಪುರ ಫ್ರೆಂಚ್ ರಾಕ್ಸ್ ಶತಮಾನ ಸರ್ಕಾರಿ ಶಾಲೆ ಸೂಕ್ತ ಉದಾಹರಣೆ ಎಂದರು.

ಅಂದು ಎಸಿಯಾಗಿದ್ದ ಡಾ.ಎಚ್.ಎಲ್.ನಾಗರಾಜು ಅವರು ಕೇವಲ 42 ಮಕ್ಕಳಿದ್ದ ಫ್ರೆಂಚ್ ರಾಕ್ಸ್ ಸರ್ಕಾರಿ ಶಾಲೆಯನ್ನು ಉನ್ನತೀಕರಣಗೊಳಿಸಿ 400ಕ್ಕೂ ಮಕ್ಕಳನ್ನು ಶಾಲೆಗೆ ದಾಖಲಾಗುವಂತೆ ಮಾಡಿದರು‌. ಬಳಿಕ ಫ್ರೆಂಚ್ ರಾಕ್ಸ್ ಶಾಲೆಗೆ ರಾಜ್ಯಮಟ್ಟದ ಅತ್ಯುತ್ತಮ ಎಸ್ ಡಿಎಂಸಿ ಪ್ರಶಸ್ತಿ ಕೂಡ ಲಭಿಸಿತು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಧರ್ಮಶೆಟ್ಟಿ ಮಾತನಾಡಿ, ಪಾಂಡವಪುರ ತಾಲೂಕಿನಲ್ಲಿ ಒಟ್ಟು 9672 ಮಕ್ಕಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಡಾ.ಕೆ.ವೈ.ಶ್ರೀನಿವಾಸ್ ಅವರ ಪುತ್ರ ಡಾ.ಕೆ.ಎಸ್.ಅಭಿನಯ್ ಅವರು 75 ಶಾಲೆ ಮಕ್ಕಳಿಗೆ ನೋಟ್ ಬುಕ್ ಹಾಗೂ ಇಂಗ್ಲಿಷ್ ನಿಘಂಟು ವಿತರಿಸಿದ್ದಾರೆ. ಸರ್ಕಾರಿ ಶಾಲೆಗಳ ನೆರವಿಗೆ ಮತ್ತಷ್ಟು ದಾನಿಗಳು ನೆರವಾಗಬೇಕು ಎಂದರು.

ವಕೀಲರ ಸಂಘದ ಕಾರ್ಯದರ್ಶಿ ಕೆ.ಎಸ್.ಮೋಹನ್ ಕುಮಾರ್, ದಂತ ವೈದ್ಯ ಡಾ.ಕೆ.ಎಸ್.ಅಭಿನಯ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುಷ್ಪ ಶ್ರೀನಿವಾಸ್, ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಹರಳಹಳ್ಳಿ ಪುಟ್ಟರಾಜು, ಸಹ ಶಿಕ್ಷಕಿ ಪ್ರಭಾಮಣಿ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ