ಕನ್ನಡಪ್ರಭ ವಾರ್ತೆ ಉಡುಪಿ
ಅವರು ನಗರದ ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಂಡ ಕಾಲೇಜಿನ ಸಂಸ್ಥಾಪಕ ಡಾ.ಮಾಧವ ಪೈ ಅವರ 126ನೇ ಜನ್ಮ ದಿನಾಚರಣೆ ಸಂದರ್ಭ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾಮಾಜಿಕ ಸಹಭಾಗಿತ್ವದ ಕಲ್ಪನೆಯ ಆಧಾರವಾಗಿಟ್ಟುಕೊಂಡು ತಮ್ಮ ಎಲ್ಲ ಸಂಸ್ಥೆಗಳನ್ನು ಕಟ್ಟಿದ ಮಹಾನ್ ಸಾಧಕ ಡಾ.ಮಾಧವ ಪೈಯವರು. ಹಾಗಾಗಿಯೇ ಅವರು ಕಟ್ಟಿದ ಶಿಕ್ಷಣ ಆರೇೂಗ್ಯ ಬ್ಯಾಂಕಿಂಗ್ ಸಂಸ್ಥೆಗಳು ಇಂದಿನ ಜಾಗತಿಕ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಿ ಬೆಳೆದು ನಿಲ್ಲಲು ಸಾಧ್ಯವಾಯಿತು ಎಂದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮಿನಾರಾಯಣ ಕಾರಂತ ವಹಿಸಿದ್ದರು. ಎಂ.ಜಿ.ಎಂ. ಪದವಿ ಪೂವ೯ ವಿಭಾಗದ ಪ್ರಾಂಶುಪಾಲೆ ಮಾಲತಿ ದೇವಿ, ರಾಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಅರುಣ ಕುಮಾರ್ ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ಎಂ.ವಿಶ್ವನಾಥ ಪೈ ವಂದಿಸಿದರು.
ಕಾಲೇಜಿನ ಆಡಳಿತ ಸೌಧದ ಮುಂಭಾಗದಲ್ಲಿರುವ ಡಾ.ಮಾಧವ ಪೈ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡಲಾಯಿತು