ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ತಮ್ಮ ನಿವಾಸ ಶಿವಪಾರ್ವತಿಯಲ್ಲಿ ಮನೆ ದೇವರಿಗೆ ಪೂಜೆ, ಅತ್ತೆ ದಿವಂಗತ ಪಾರ್ವತಮ್ಮ ಶಾಮನೂರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತಮ್ಮ ಹೆತ್ತ ತಾಯಿ ಗಿರಿಜಮ್ಮ, ಹಾಗೂ ಮಾವನವರಾದ ಡಾ.ಶಾಮನೂರು ಶಿವಶಂಕರಪ್ಪನವರ ಆಶೀರ್ವಾದ ಪಡೆದು, ಶಾಬನೂರು ಶ್ರೀ ಆಂಜನೇಯ ಸ್ವಾಮಿ, ಶ್ರೀ ಈಶ್ವರ ದೇವಸ್ಥಾನಕ್ಕೆ ಪತಿ ಮಲ್ಲಿಕಾರ್ಜುನ ಜೊತೆಗೆ ತೆರಳಿ, ಪೂಜೆ ಸಲ್ಲಿಸಿದರು.
ಶಾಬನೂರಿನಲ್ಲೂ ಅಪಾರ ಬೆಂಬಲಿಗರು, ಅಭಿಮಾನಿಗಳು, ಮುಖಂಡರ ಜಯಘೋಷಗಳ ಮಧ್ಯೆ ಮತಯಾಚಿಸಿದ ನಂತರ ನಿಟುವಳ್ಳಿಯ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಬಳಿ ಪತಿ ಎಸ್.ಎಸ್.ಮಲ್ಲಿಕಾರ್ಜುನ, ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಇತರರ ಜೊತೆಗೆ ಪೂಜೆ ಸಲ್ಲಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ ನಂತರ ಅಪಾರ ಜನರ ಹರ್ಷೋದ್ಘಾರಗಳ ಮಧ್ಯೆ ವಾಹನವನ್ನೇರಿದರು. ಈ ಮಧ್ಯೆ ವಾಹನದಲ್ಲಿದ್ದಾಗಲೇ ಎಸ್.ಎಸ್.ಮಲ್ಲಿಕಾರ್ಜುನ ಬೆಣ್ಣೆದೋಸೆ ಸವಿದರಲ್ಲದೇ, ಡಾ.ಪ್ರಭಾ ಮಲ್ಲಿಕಾರ್ಜುನರಿಗೂ ತಿನಿಸಿ, ರೋಡ್ ಶೋ ಆರಂಭಿಸಿದರು.ಅತ್ತ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಬಳಿ ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿ, ದರ್ಗಾದಲ್ಲಿ ಪೂಜೆ ಸಲ್ಲಿಸಿದರು. ಶಾಸಕರಾದ ಡಿ.ಜಿ.ಶಾಂತನಗೌಡ, ಶಿವಗಂಗಾ ವಿ.ಬಸವರಾಜ, ಬಿ.ದೇವೇಂದ್ರಪ್ಪ, ಎಂ.ಪಿ.ಲತಾ, ಕೆ.ಎಸ್.ಬಸವಂತಪ್ಪ, ಹಾಗೂ ಶ್ರೇಷ್ಟ ಎಂ.ಶಾಮನೂರು, ಮಾಜಿ ಮೇಯರ್ ಅನಿತಾ ಬಾಯಿ ಮಾಲತೇಶ, ಬಿ.ಎಚ್.ವೀರಭದ್ರಪ್ಪ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ರೋಡ್ ಶೋನಲ್ಲಿ ಸಾಗಿದರು. ದುಗ್ಗಮ್ಮ ಗುಡಿಯಿಂದ ಶುರುವಾದ ಮೆರವಣಿಗೆ ಹಗೇದಿಬ್ಬ ವೃತ್ತ, ಕಾಳಿಕಾದೇವಿ ರಸ್ತೆ, ಚೌಕಿಪೇಟೆ, ಶ್ರೀ ಬಕ್ಕೇಶ್ವರ ದೇವಸ್ಥಾನ, ಹಾಸಬಾವಿ ಸರ್ಕಲ್, ಮಂಡಿಪೇಟೆ, ಲಕ್ಷ್ಮಿ ವೃತ್ತದ ಮಾರ್ಗವಾಗಿ ಪಾಲಿಕೆ ಮುಂಭಾಗ ತಲುಪಿತು.
ಪಕ್ಷದ ಹಿರಿಯ ಮುಖಂಡರು ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಎಸ್.ರಾಮಪ್ಪ, ನಂದಿಗಾವಿ ಶ್ರೀನಿವಾಸ, ಅರಸೀಕೆರೆ ಕೊಟ್ರೇಶ, ಬಿ.ಎಂ.ವಾಗೀಶ ಸ್ವಾಮಿ, ಡಾ.ಟಿ.ಜಿ.ರವಿಕುಮಾರ, ಸಮರ್ಥ ಎಂ.ಶಾಮನೂರು, ಡಿ.ಬಸವರಾಜ, ಕೆ.ಚಮನ್ ಸಾಬ್, ಅಬ್ದುಲ್ ಲತೀಫ, ದಿನೇಶ ಶೆಟ್ಟಿ, ಮುದೇಗೌಡ್ರ ಗಿರೀಶ, ಹಿರಿಯ ವಕೀಲ ಪ್ರಕಾಶ ಪಾಟೀಲ, ಆರ್.ಎಚ್. ನಾಗಭೂಷಣ, ಮಾಗಾನಹಳ್ಳಿ ಪರಶುರಾಮ, ಬಿ.ಎಚ್.ವೀರಭದ್ರಪ್ಪ, ಎಲ್.ಎಂ.ಹನುಮಂತಪ್ಪ, ಅಯೂಬ್ ಪೈಲ್ವಾನ್, ಎಸ್.ಮಲ್ಲಿಕಾರ್ಜುನ, ಎ.ನಾಗರಾಜ, ಗಣೇಶ ಹುಲ್ಮನಿ, ಪ್ರವೀಣ ಹುಲ್ಮನಿ, ಕೆ.ಎಲ್.ಹರೀಶ ಬಸಾಪುರ, ಶ್ರೀಕಾಂತ ಬಗರೆ, ಡಿ.ವಿ.ಮಲ್ಲಿಕಾರ್ಜುನ ಸ್ವಾಮಿ, ಎಲ್ಎಂಎಚ್ ಸಾಗರ್, ಎ.ಬಿ.ರಹೀಂ, ಎಚ್.ಜೆ.ಮೈನುದ್ದೀನ್ ಸೇರಿ ಅನೇಕ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಮೆರವಣಿಗೆಯಲ್ಲಿದ್ದರು.