- ಭದ್ರಾವತಿ ಅರಣ್ಯ ವಿಭಾಗದ ವ್ಯಾಪ್ತಿಯನ್ನು ದಾವಣಗೆರೆಗೆ ವರ್ಗಾಯಿಸಲು ಸಿಎಂಗೆ ಮನವಿ - - -
ದಾವಣಗೆರೆ ಜಿಲ್ಲೆಯ 799 ಶುದ್ಧ ಕುಡಿಯುವ ಘಟಕಗಳ ದುರಸ್ತಿ, ಅರಣ್ಯ ಆಡಳಿತ ಪುನರ್ ವ್ಯವಸ್ಥೆಗೆ ಹಾಗೂ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಉತ್ತೇಜನ ನೀಡುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯ 799 ಶುದ್ಧ ನೀರಿನ ಘಟಕಗಳಲ್ಲಿ 94 ಘಟಕ ಕಾರ್ಯ ನಿರ್ವಹಿಸುತ್ತಿಲ್ಲ ಎಂದರು.ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಇದರಿಂದಾಗಿ ತೀವ್ರ ತೊಂದರೆ ಆಗುತ್ತಿದೆ. ಶುದ್ಧ ನೀರಿನ ಘಟಕಗಳ ದುರಸ್ತಿಗಾಗಿ ₹2.99 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಬಂದ ಅನುದಾನ ದುರಸ್ತಿ ಕಾಮಗಾರಿಗಳಿಗೆ ಕೈಗೊಳ್ಳಲು ಬಳಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಗ್ರಾಮೀಣ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಸರ್ಕಾರದಿಂದಲೇ ಖರೀದಿಸಿ, ಮಾರುಕಟ್ಟೆ ಬೆಂಬಲ ಒದಗಿಸಬೇಕು. ಈ ಮೂಲಕ ಅಂತಹ ಮಹಿಳೆಯರರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಅಗತ್ಯ ಪ್ರೋತ್ಸಾಹ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮನವಿ ಮಾಡಿದರು.
(ಬಾಕ್ಸ್)
ದಕ್ಷಿಣ ಶಾಸಕ ಸಮರ್ಥ ಎಂ. ಶಾಮನೂರು ಮಾತನಾಡಿ, ರೈತರ ಹಿತದೃಷ್ಟಿಯಿಂದ ಬೆಳೆವಿಮೆ ಯೋಜನೆಯಲ್ಲಿ ಸರ್ಕಾರದಿಂದ ಹೆಚ್ಚಿನ ಸಹಾಯಧನ ನೀಡುವ ಅಗತ್ಯವಿದೆ. ಬೆಳೆವಿಮೆ ಕಂತಿನಲ್ಲಿ ಕನಿಷ್ಠ ಶೇ.50ರಷ್ಟು ಸಬ್ಸಿಡಿ ನೀಡಿದರೆ ಹೆಚ್ಚಿನ ರೈತರು ವಿಮೆ ಮಾಡಿಸಿಕೊಳ್ಳಲು ಮುಂದಾಗುತ್ತಾರೆ. ಇದರಿಂದ ರೈತರಿಗೆ ಆರ್ಥಿಕ ಭದ್ರತೆ ನೀಡಿದಂತಾಗುತ್ತದೆ. ದಾವಣಗೆರೆ ತಾಲೂಕಲ್ಲಿ ಎಸ್ಬಿಐ ಜನರಲ್ ಇನ್ಶೂರೆನ್ಸ್ ಮೂಲಕ ಬೆಳೆವಿಮೆ ಮಾಡುತ್ತಿದ್ದು, ಮೆಕ್ಕೆಜೋಳ ಬೆಳೆಗೆ ಹೆಕ್ಟೇರ್ಗೆ ಸುಮಾರು ₹2,500 ವಿಮೆ ಕಂತು ಪಾವತಿಸಬೇಕು. ಪರಿಹಾರವಾಗಿ ₹65 ಸಾವಿರ ಸಿಗುತ್ತದೆ. ಆರಂಭಿಕ ಕಂತಿನ ಮೊತ್ತವೇ ರೈತರಿಗೆ ಹೊರೆಯಾಗಿದೆ. ಕಂತಿನ ಮೊತ್ತ ಕಡಿಮೆಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿ ಎಂದರು.
ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾಗಲು ಪ್ರತಿ ಗ್ರಾಪಂನಲ್ಲೂ ಪಿಡಿಒ, ಆರ್ಐ/ಆರ್ಎಲ್ಒ, ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳೀಯವಾಗಿ ವಾಸ್ತವ್ಯ ಹೂಡಿ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವ ವ್ಯವಸ್ಥೆ ರೂಪಿಸಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ಬೆಂಗಳೂರು ಪ್ರಾದೇಶಿಕ ವಿಭಾಗಕ್ಕೊಳಪಡುವ ವಿವಿಧ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಅಭಿವೃದ್ಧಿ ಕಾಮಗಾರಿ ಪ್ರಗತಿ, ಸೌಕರ್ಯ ಅಭಿವೃದ್ಧಿ, ನೀರು, ರಸ್ತೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಪರಿಶೀಲಿಸಲಾಯಿತು.
-25ಕೆಡಿವಿಜಿ8: ಪ್ರಗತಿ ಪರಿಶೀಲನಾ ಸಭೆಯಲ್ಲಿ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿದರು. -25ಕೆಡಿವಿಜಿ9: ಸಭೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ ಸಮರ್ಥ ಎಂ. ಶಾಮನೂರು ಮಾತನಾಡಿದರು.-25ಕೆಡಿವಿಜಿ10: ಸಭೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಮಾತನಾಡಿದರು.