ಕನ್ನಡ ಅಸ್ಮಿತೆಯ ಸಂಕೇತ ಡಾ.ರಾಜ್‌ಕುಮಾರ್‌

KannadaprabhaNewsNetwork |  
Published : Apr 24, 2025, 11:46 PM IST
ದೊಡ್ಡಬಳ್ಳಾಪುರದಲ್ಲಿ ಗುರುವಾರ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಡಾ.ರಾಜ್‌ಕುಮಾರ್‌ ಅವರ 96ನೇ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. | Kannada Prabha

ಸಾರಾಂಶ

ಇಲ್ಲಿನ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ವರನಟ ಡಾ.ರಾಜ್‌ಕುಮಾರ್‌ ಅವರ 96ನೇ ಜನ್ಮದಿನಾಚರಣೆಯಲ್ಲಿ ಬುಧವಾರ ಇಲ್ಲಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಇಲ್ಲಿನ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ವರನಟ ಡಾ.ರಾಜ್‌ಕುಮಾರ್‌ ಅವರ 96ನೇ ಜನ್ಮದಿನಾಚರಣೆಯಲ್ಲಿ ಬುಧವಾರ ಇಲ್ಲಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಜಯಚಾಮರಾಜೇಂದ್ರ ವೃತ್ತದಲ್ಲಿ ರಾಜ್‌ಕುಮಾರ್‌ ಭಾವಚಿತ್ರಕ್ಕೆ ಅಭಿಮಾನಿಗಳು ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಮುಖಂಡರು, ಡಾ.ರಾಜ್‌ಕುಮಾರ್ ಅವರು ಕನ್ನಡದ ಅಸ್ಮಿತೆಯ ಸಂಕೇತ. ಪಾತ್ರಗಳ ಮೂಲಕ ಸಾಮಾಜಿಕ ಸಂದೇಶವನ್ನು ನಿರಂತರವಾಗಿ ನೀಡಿದ ಅವರು, ಎಲ್ಲ ವರ್ಗಗಳು, ಎಲ್ಲ ವಯೋಮಿತಿಯ ಜನತೆಗೆ ಮಾದರಿ ಆಲೋಚನೆಗಳನ್ನು ಬಿತ್ತಿದರು. ಕನ್ನಡ ಚಳವಳಿ, ಹೋರಾಟ, ಭಾಷಾ ಅಸ್ಮಿತೆ, ನಾಡು-ನುಡಿಯ ಚಿಂತನೆಗಳಿಗೆ ಡಾ.ರಾಜ್‌ಕುಮಾರ್‌ ಅನ್ವರ್ಥ ಎಂಬಂತೆ ತನ್ನ ಬದುಕನ್ನು ರೂಪಿಸಿಕೊಂಡಿದ್ದರು ಎಂದು ತಿಳಿಸಿದರು.

ದೊಡ್ಡಬಳ್ಳಾಪುರದೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಡಾ.ರಾಜ್‌ಕುಮಾರ್, ಕಂಪನಿ ನಾಟಕಗಳ ಕಾಲದಿಂದಲೂ ಈ ಊರಿನ ಜೊತೆ ಬಾಂಧವ್ಯ ಬೆಸೆದುಕೊಂಡಿದ್ದರು. ಕೆಸಿಎನ್‌ ಗೌಡರ ಅನೇಕ ಚಿತ್ರಗಳಲ್ಲಿ ಅವರು ಪಾತ್ರ ಮಾಡಿದ್ದು, ದೊಡ್ಡಬಳ್ಳಾಪುರ ಸುತ್ತಮುತ್ತಲ ಅನೇಕ ತಾಣಗಳಲ್ಲಿ ಅವರ ಹಲವು ಚಿತ್ರಗಳು ಚಿತ್ರೀಕರಣಗೊಂಡಿದ್ದವು ಎಂಬುದು ವಿಶೇಷ ಎಂದು ತಿಳಿಸಿದರು.

ಸರ್ಕಾರ ಡಾ.ರಾಜ್‌ಕುಮಾರ್‌ ಅವರ ದಿನವನ್ನು ಕಲಾವಿದರ ದಿನವಾಗಿ ಆಚರಿಸಬೇಕು. ಈಗಾಗಲೇ ಸರ್ಕಾರದ ವತಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಚರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲೂ ಆಚರಣೆ ನಡೆಯಬೇಕು. ಕನ್ನಡದ ಅನನ್ಯತೆಯ ಸಂಕೇತವಾದ ಅವರು, ಅಭಿನಯ, ಗಾಯನ, ರಂಗಭೂಮಿ ಸೇರಿದಂತೆ ಬಹುಬಗೆಯ ಕಲಾಚಟುವಟಿಕೆಗಳ ಸಂಗಮ ಸಂಕೇತ ಎಂದು ಬಣ್ಣಿಸಿದರು.

ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಹಿರಿಯ ಕನ್ನಡಪರ ಹೋರಾಟಗಾರರಾದ ಜಿ.ಸತ್ಯನಾರಾಯಣ್, ಸಂಜೀವನಾಯಕ್, ಸಂಘಟನೆಗಳ ಮುಖಂಡರಾದ ಡಿ.ಪಿ.ಆಂಜನೇಯ, ರಾಜಘಟ್ಟ ರವಿ, ವಿ.ಪರಮೇಶ್, ವೆಂಕಟೇಶ್‌, ಮುನಿಪಾಪಯ್ಯ, ಗುರುರಾಜಪ್ಪ, ಜೆ.ಆರ್.ರಮೇಶ್‌, ಅಪ್ಪಿ ವೆಂಕಟೇಶ್, ಟಿ.ಜಿ.ಮಂಜುನಾಥ್, ಪ್ರಮೀಳಾ ಮಹದೇವ್, ಮಂಜುನಾಥ್, ಜಿ.ಸುರೇಶ್, ದೃವಕುಮಾರ್, ಡಿ.ಸಿ.ಚೌಡರಾಜು, ಮರುಳಾರಾಧ್ಯ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಡಾ.ರಾಜ್‌ಕುಮಾರ್, ಶಿವರಾಜ್‌ಕುಮಾರ್, ಪುನಿತ್‌ರಾಜ್‌ಕುಮಾರ್‌ ಸೇರಿದಂತೆ ವಿವಿಧ ಅಭಿಮಾನಿ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪೆಹಲ್ಗಾಂ ಹುತಾತ್ಮರಿಗೆ ಸಂತಾಪ:

ಇದೇ ವೇಳೆ ಕಾಶ್ಮೀರದ ಪೆಹಲ್‌ಗಾಂನಲ್ಲಿ ಉಗ್ರಗಾಮಿಗಳು ನಡೆಸಿದ ನರಮೇಧದಲ್ಲಿ ಬಲಿಯಾದ 26 ನಾಗರಿಕರಿಗೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು. ಎಲ್ಲ ಕನ್ನಡ ಸಂಘಟನೆಗಳು ಉಗ್ರರ ದುಷ್ಕೃತ್ಯವನ್ನು ಖಂಡಿಸಿ, ಕೂಡಲೇ ಸರ್ಕಾರ ಸೂಕ್ತ ಪ್ರತ್ಯುತ್ತರ ನೀಡಬೇಕು. ಭಯೋತ್ಪಾದಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ
ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?