ಮರಣದ ನಂತರವು ಜೀವಿಸಿರುವ ಪುನೀತ್ ರಾಜಕುಮಾರ್

KannadaprabhaNewsNetwork |  
Published : Oct 31, 2025, 02:15 AM IST
29 | Kannada Prabha

ಸಾರಾಂಶ

ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ,

ಕನ್ನಡಪ್ರಭ ವಾರ್ತೆ ಮೈಸೂರುನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ವರನಟ ಡಾ. ರಾಜಕುಮಾರ್ ಅವರ ಪ್ರತಿಮೆಯ ಮುಂಭಾಗ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ನಂತರ ಅಭಿಮಾನಿಗಳಿಗೆ ಅನ್ನದಾನ ನೆರವೇರಿಸಲಾಯಿತು ವೈದ್ಯರಾದ ಡಾ. ಎಸ್.ಪಿ. ಯೋಗಣ್ಣ ಮಾತನಾಡಿ, ಜನನವಾದ ಮೇಲೆ ಮರಣ ನಿಶ್ಚಿತ, ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್ ರಾಜಕುಮಾರ್ ಅವರದ್ದಾಗಿತ್ತು ಎಂದರು.ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ ಹೇಗೆ ಬದುಕಿದ್ದರು ಎಂಬುದೇ ಮುಖ್ಯ, ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ, ಅವರ ಬದುಕಿನ ದಿನಗಳಲ್ಲಿ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ ಎಂದು ಹೇಳಿದರುಹಿರಿಯ ಸಮಾಜ ಸೇವಕರಾದ ಕೆ. ರಘುರಾಂ ವಾಜಪೇಯಿ ಮಾತನಾಡಿ,ಸರಳತೆ ಮತ್ತು ಪರೋಪಕಾರ ಗುಣಗಳನ್ನು ಅಳವಡಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದ ಪುನೀತ್ ರಾಜಮಾರ್ ಮಾನವೀಯ ಮೌಲ್ಯಗಳ ಗಣಿ ಆಗಿದ್ದರು ಎಂದು ಹೇಳಿದರು.ಕೆಪಿಸಿಸಿ ಸದಸ್ಯ ಜಿ. ಶ್ರೀನಾಥ್ ಬಾಬು, ಜಿ. ರಾಘವೇಂದ್ರ, ಕಿಶೋರ್ ಕುಮಾರ್, ಎಲ್.ಐಸಿ ಬಾಲು, ಶೇಖರ್, ಕಿರಣ್, ಮಂಜುನಾಥ್, ಎಸ್.ಎನ್. ರಾಜೇಶ್, ಹರೀಶ್ ನಾಯ್ಡು, ಷಣ್ಮುಗನ್, ಮಾಯಣ್ಣ, ನಟರಾಜ್, ನಾಗರಾಜ್, ಮಲ್ಲೇಶ್, ಸತೀಶ್, ಲಕ್ಷ್ಮಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''