ಡೆಂಘೀ ತಡೆಗೆ ಡಾ.ಸರ್ಜಿ ‘ಮಸ್ಕಿಟೋ ರೆಪಲೆಂಟ್’ ಸೂತ್ರ

KannadaprabhaNewsNetwork |  
Published : Jul 25, 2024, 01:16 AM IST
ಕಲಾಪದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಮಾತನಾಡಿದರು. | Kannada Prabha

ಸಾರಾಂಶ

ಡೆಂಘೀ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ‘ಮಸ್ಕಿಟೋ ರೆಪಲೆಂಟ್ ’ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಕಲಾಪದಲ್ಲಿ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯದಲ್ಲಿ ಡೆಂಘೀ ರೋಗ ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಡೆಂಘೀ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ‘ಮಸ್ಕಿಟೋ ರೆಪಲೆಂಟ್ ’ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು

ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಮಾತನಾಡಿ, ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ಹಾಗೂ ಸಾವುಗಳು ಹೆಚ್ಚಾಗುತ್ತಿದೆ. ಆದರೆ ಆರೋಗ್ಯ ಇಲಾಖೆ ನೀಡುತ್ತಿರುವ ವರದಿಗಳಲ್ಲಿ ತಪ್ಪಾಗಿ ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘೀ ರೋಗದ ನಿಯಂತ್ರಣಕ್ಕೆ ಎಷ್ಟು ಮಸ್ಕಿಟೋ ರೆಪಲೆಂಟ್ ಗಳನ್ನು ಖರೀದಿ ಮಾಡಲಾಗಿದೆ ಮತ್ತು ಎಷ್ಟನ್ನು ಡೆಂಘೀ ರೋಗಿಗಳಿಗೆ ವಿತರಿಸಲಾಗಿದೆ ಎಂದು ಪ್ರಶ್ನಿಸಿದ ಅವರು, ಈ ವೇಳೆ ಡೆಂಘೀ ಬಂದಂತಹ ವ್ಯಕ್ತಿಗೆ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚಿದರೆ, ಆ ಸೊಳ್ಳೆಗೂ ಸೋಂಕು ತಗುಲುತ್ತದೆ. ಆ ಸೊಳ್ಳೆಯು 10 ದಿನಗಳವರೆಗೂ ಯಾವ ಯಾವ ವ್ಯಕ್ತಿಗೆ ಕಚ್ಚುತ್ತದೆಯೋ ಎಲ್ಲರಿಗೂ ಸೋಂಕು ಹರಡುತ್ತದೆ ಎಂದು ವಿಷಯ ಪ್ರಸ್ತಾಪಿಸಿದಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೌದಾ.. ಎಂದು ಉದ್ಘರಿಸಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು. ಆಗ ವಿಧಾನ ಪರಿಷತ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಡಾ.ಸರ್ಜಿ ಅವರು ಹೇಳಿರುವುದು ಸರಿ ಇದೆ ಎಂದು ಧ್ವನಿಗೂಡಿಸಿದರು.

ಮುಂದುವರಿದು, ಡೆಂಘೀ ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಬಹಳ ಮುಖ್ಯವಾಗಿ ಡೀಟ್ ಅಂಶ ಇರುವ ರೆಪಲೆಂಟ್ ಗಳನ್ನು ಹಚ್ಚಬೇಕು, ಇದರಿಂದ ಅವರಿಗೆ ಸೊಳ್ಳೆ ಕಚ್ಚುವುದನ್ನು ತಡೆಯಬಹುದು ಹಾಗೂ ಇದರಿಂದ ಸೊಳ್ಳೆಗಳಿಗೆ ಇನ್ಫೆಕ್ಷನ್ ಆಗಿ, ಅದು ಬೇರೆ ಅವರಿಗೆ ಹರಡುವುದನ್ನು ತಡೆಯ ಬಹುದು ಎಂದು ಹೇಳಿದರು.

ಡೆಂಘೀ ಪೀಡಿತ ವ್ಯಕ್ತಿಗೆ ಮೊದಲು ವೈಯಕ್ತಿಕ ರಕ್ಷಣೆಯನ್ನು ಒದಗಿಸಬೇಕು. ಈ ನಿಟ್ಟಿನಲ್ಲಿ ಸೊಳ್ಳೆ ಪರದೆ ಅಥವಾ ಮಸ್ಕಿಟೋ ರೆಪಲೆಂಟ್ ಅನ್ನು ಬೆಳಗ್ಗೆ ಮತ್ತು ಸಂಜೆ ಹಚ್ಚಿಕೊಳ್ಳಬೇಕು. ಮಸ್ಕಿಟೋ ರೆಪಲೆಂಟ್ ಹಚ್ಚಿಕೊಳ್ಳುವುದರಿಂದ ಡೆಂಘೀ ಪೀಡಿತ ವ್ಯಕ್ತಿಗೆ ಸೊಳ್ಳೆಗಳು ಕಚ್ಚುವುದಿಲ್ಲ, ಆಗ ಸೋಂಕು ಹರಡುವುದು ಕಡಿಮೆ ಯಾಗುತ್ತದೆ. ಹಾಗಾಗಿ ಡೆಂಘೀ ಬಂದಂತಹ ವ್ಯಕ್ತಿಗಳಿಗೆ 10 ರಿಂದ 14 ದಿನಗಳವರೆಗೂ ಕಡ್ಡಾಯವಾಗಿ ಮಸ್ಕಿಟೋ ರೆಪಲೆಂಟ್ ಹಚ್ಚಿಕೊಳ್ಳುವಂತೆ ಸಲಹೆ ನೀಡಿದರು.

ಈ ವೇಳೆ ಸಚಿವ ದಿನೇಶ್ ಗುಂಡುರಾವ್ ಡಾ.ಸರ್ಜಿ ಅವರ ಸಲಹೆ ಸೂಕ್ತವಾಗಿದೆ ಇದನ್ನ ಪರಿಗಣಿಸಿ ಮುಂಜಾಗ್ರತಾ ಕ್ರಮಗಳನ್ನು ಕೈ ಕೊಳ್ಳಲಾಗುವುದು ಎಂದು ಹೇಳಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್ ಜಿ ಪರ 15ರಿಂದ ಅಭಿಯಾನ: ವಿಜಯೇಂದ್ರ
.ರಾಜ್ಯದ ಕಾಂಗ್ರೆಸ್‌ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ