ಕನ್ನಡಪ್ರಭ ವಾರ್ತೆ ಉಡುಪಿ
ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿ ಹೀಗೆ ಕನ್ನಡ ಸಾರಸ್ವತ ಲೋಕದಲ್ಲಿ ಹೆಸರುವಾಸಿಯಾದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತದೆ
ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರು ಬೆಂಗಳೂರು ವಿ.ವಿ.ಯಿಂದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಪದವಿ, ಕಂಪ್ಯೂಟರ್ ಸೈನ್ಸ್ನಲ್ಲಿ ಪಿಎಚ್.ಡಿ ಹಾಗೂ ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಈಗ ಕನ್ನಡ ಎಂ.ಎ. ಪದವಿ ಪಡೆದು ಪಿಎಚ್.ಡಿ.ಗಾಗಿ ಜೈನ್ ವಿಶ್ವವಿದ್ಯಾಲಯದಲ್ಲಿ ನವ್ಯಕಾವ್ಯದ ಕುರಿತಾದ ಸಂಶೋಧನೆಯ ಅಂತಿಮ ಹಂತದಲ್ಲಿದ್ದಾರೆ. ಹಲವು ಪ್ರತಿಷ್ಠಿತ ಕಂಪೆನಿಗಳಲ್ಲಿ ಕೆಲಸ ಮಾಡಿರುವ ಇವರು ಪ್ರಸ್ತುತ ಅಮೆಜಾನ್ ಕಂಪನಿಯಲ್ಲಿ ಸೊಲ್ಯೂಷನ್ಸ್ ಆರ್ಕಿಟೆಕ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಸಾಹಿತ್ಯ, ಸಂಶೋಧನೆ, ಪುಸ್ತಕ ಬರವಣಿಗೆ ಹಾಗೂ ಮಾಹಿತಿ ತಂತ್ರಜ್ಞಾನದಲ್ಲಿ ಸೃಜನಶೀಲ ಬಹುಮುಖ ಪ್ರತಿಭೆ ಹೊಂದಿರುವ ಶೈಲೇಶ್ ಕುಮಾರ್ ಅವರು ೯ ತಾಂತ್ರಿಕ ಪುಸ್ತಕಗಳನ್ನು ಬರೆದಿದ್ದಾರೆ. 100ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ ಅವರು ಬರೆದಿರುವ ೩೯ ಪಠ್ಯಪುಸ್ತಕ ಅಧ್ಯಾಯಗಳು ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಪಠ್ಯವಾಗಿವೆ. ಅವರು ತಮ್ಮ ಸಂಶೋಧನೆಗಾಗಿ ಎರಡು ಅಮೆರಿಕೆಯ ಪೇಟೆಂಟ್ಗಳನ್ನು ಹೊಂದಿದ್ದಾರೆ.