ಸ್ರ್ರೀ ಕುಲಕ್ಕೆ ಸ್ಫೂರ್ತಿಯ ಸೆಲೆಯಾಗಿದ್ದ ಡಾ. ಶಿಂತ್ರಿ

KannadaprabhaNewsNetwork |  
Published : Jul 07, 2026, 03:00 AM IST
ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಡಾ. ಸರೋಜಿನಿ ಶಿಂತ್ರಿ ಸಂಸ್ಮರಣೆ ದತ್ತಿ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

ಮನೆಯೇ ಮೊದಲ ಪಾಠಶಾಲೆ ಎಂಬಂತೆ ಡಾ. ಸರೋಜಿನಿ ಶಿಂತ್ರಿಯವರ ವ್ಯಕ್ತಿತ್ವ ನಿರ್ಮಾಣವಾದದ್ದೇ ಮನೆಯಲ್ಲಿ. ತಂದೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದು ಮಗಳಿಗೆ ಒಳ್ಳೆಯ ಸಂಸ್ಕಾರ ನೀಡಿದರು.

ಧಾರವಾಡ:

ಶತಮಾನಗಳಿಂದ ಶೋಷಣೆಗೆ ಒಳಪಟ್ಟು ಕತ್ತಲಿನಲ್ಲಿಯೇ ಬದುಕು ಸಾಗಿಸುತ್ತಿದ್ದ ಮಹಿಳೆಯರ ಪರವಾಗಿ ಗಟ್ಟಿ ಧ್ವನಿ ಎತ್ತಿದ ಧೀಮಂತ ಮಹಿಳೆ ಡಾ. ಸರೋಜಿನಿ ಶಿಂತ್ರಿ ಅವರು ಸ್ತ್ರೀಕುಲಕ್ಕೆ ಸ್ಫೂರ್ತಿಯ ಸೆಲೆಯಾಗಿದ್ದರು ಎಂದು ಲೇಖಕಿ ಸರಸ್ವತಿ ಭೋಸಲೆ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘ ಡಾ. ಸರೋಜಿನಿ ಶಿಂತ್ರಿ ಸಂಸ್ಮರಣೆ ದತ್ತಿಯಲ್ಲಿ ಉಪನ್ಯಾಸ ನೀಡಿದ ಅವರು, ಮನೆಯೇ ಮೊದಲ ಪಾಠಶಾಲೆ ಎಂಬಂತೆ ಡಾ. ಸರೋಜಿನಿ ಶಿಂತ್ರಿಯವರ ವ್ಯಕ್ತಿತ್ವ ನಿರ್ಮಾಣವಾದದ್ದೇ ಮನೆಯಲ್ಲಿ. ತಂದೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದು ಮಗಳಿಗೆ ಒಳ್ಳೆಯ ಸಂಸ್ಕಾರ ನೀಡಿದರು. ಆ ಕಾಲದಲ್ಲಿ ಮಹಿಳೆ ಶಿಕ್ಷಣ ಪಡೆಯುವುದೇ ಅಪರೂಪವಾಗಿತ್ತು. ಇಂಥ ಕಾಲಘಟ್ಟದಲ್ಲಿ ಸಂಪ್ರದಾಯ ಮೀರಿ ಮಗಳಿಗೆ ಉನ್ನತ ಶಿಕ್ಷಣ ಕೊಡಿಸಿದರು. ಹೆಣ್ಣು ಮಕ್ಕಳೇ ನಮ್ಮ ಆಸ್ತಿ ಎಂದು ಬೆಳೆಸಿದರು. ಬಾಲ್ಯದಲ್ಲಿ ಡಾ. ಸರೋಜಿನಿ ಶಿಂತ್ರಿ ಆಂಗ್ಲ ಕಾದಂಬರಿಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಧ್ಯಾಪಕಿ ಡಾ. ಶೈಲಜಾ ಅಮರಶೆಟ್ಟಿ ಮಾತನಾಡಿದರು. ದೊಡ್ಡಬಸಪ್ಪ ಬೆಳವಗಿ, ವೀರಣ್ಣ ಒಡ್ಡೀನ, ಶಿವಾನಂದ ಭಾವಿಕಟ್ಟಿ, ಶಂಕರ ಕುಂಬಿ, ಮಂದಾಕಿನಿ ಪುರೋಹಿತ, ಸುಮಂಗಲಾ ಮುಮ್ಮಿಗಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಕನ್ನಡ ಉಳಿವಿಗೆ ಸಮೂಹ ಪ್ರಯತ್ನ: ಜಯಪ್ರಕಾಶ ಹೆಗ್ಡೆ
ಉದ್ಯೋಗಾಕಾಂಕ್ಷಿಗಳು ಕೌಶಲ್ಯ ಬೆಳೆಸಿ: ಸುನಿಲ್ ಕುಮಾರ್