ಡಾ.ಶ್ರೀ ಶಿವಕುಮಾರ್‌ ಶ್ರೀಗಳ 118 ನೇ ಜನ್ಮದಿನಾಚರಣೆ

KannadaprabhaNewsNetwork |  
Published : Apr 02, 2025, 01:02 AM ISTUpdated : Apr 02, 2025, 01:03 AM IST
ಸಿದ್ದಗಂಗಾ ಶ್ರೀಗಳ ಜನ್ಮದಿನ-ದಾಸೋಹ ವ್ಯವಸ್ಥೆ | Kannada Prabha

ಸಾರಾಂಶ

ಸಿದ್ದಗಂಗಾ ಡಾ.ಶ್ರೀ ಶಿವಕುಮಾರ್ ಸ್ವಾಮೀಜಿಯವರ ೧೧೮ ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಇಂಚರ ಹೋಟೆಲ್ ಸಮೂಹದ ಮಾಲೀಕ ಸ್ಟೈಲ್ ಮಂಜು ಪ್ರತಿ ವರ್ಷದಂತೆ ಈ ವರ್ಷವೂ ಉಚಿತ ದಾಸೋಹದ ವ್ಯವಸ್ಥೆ ಮಾಡಿದ್ದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಿದ್ದಗಂಗಾ ಡಾ.ಶ್ರೀ ಶಿವಕುಮಾರ್ ಸ್ವಾಮೀಜಿಯವರ ೧೧೮ ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಇಂಚರ ಹೋಟೆಲ್ ಸಮೂಹದ ಮಾಲೀಕ ಸ್ಟೈಲ್ ಮಂಜು ಪ್ರತಿ ವರ್ಷದಂತೆ ಈ ವರ್ಷವೂ ಉಚಿತ ದಾಸೋಹದ ವ್ಯವಸ್ಥೆ ಮಾಡಿದ್ದರು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೋಟೆಲ್‌ನಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ನಂತರ ಬೆಳಿಗ್ಗೆಯಿಂದ ಸಂಜೆವರೆಗೆ ತಿಂಡಿ-ಊಟ ಹಾಗೂ ಪಾನಕ, ಮಜ್ಜಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಂಜು ಮಾತನಾಡಿ, ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಉಚಿತವಾಗಿ ಊಟ, ತಿಂಡಿ ವ್ಯವಸ್ಥೆ ಮಾಡುತ್ತಿದ್ದು, ಅದರಂತೆ ಈ ಬಾರಿಯು ಬೆಳಗ್ಗೆ ೧೫೦೦ ಮಂದಿಗೆ ತಿಂಡಿ, ಮಧ್ಯಾಹ್ನ ೩೫೦೦ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಇಡೀ ಪ್ರಪಂಚಕ್ಕೆ ದಾಸೋಹ ತತ್ವವನ್ನು ಸಾರಿ ತ್ರಿವಿಧ ದಾಸೋಹದಲ್ಲಿ ಎತ್ತರಕ್ಕೆ ಸಾಗಿ ಪ್ರಕಾಶಿಸಿ, ಆ ಬೆಳಕನ್ನು ಇಡೀ ನಾಡಿಗೆ ಹಂಚಿದ ದಿವ್ಯ ಬೆಳಕು ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಇಂಚರ ಗ್ರೂಪ್ ನ ಇಂಚರ, ಈಶ್ವರ್ ರಕ್ಷಿತ್, ನಾಗರತ್ಮಮ್ಮ, ಉಮಾ, ಪ್ರಕಾಶ್, ರಾಧಾಕೃಷ್ಣ ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು