ಕೆಎಲ್‌ಇ ಸಂಸ್ಥೆಗೆ ಡಾ.ಸುನೀಲ ಜಲಾಲಪುರೆ ನೂತನ ಕಾರ್ಯದರ್ಶಿ

KannadaprabhaNewsNetwork |  
Published : Jul 08, 2026, 03:00 AM IST
ಸುನೀಲ ಜಲಾಲಪುರೆ | Kannada Prabha

ಸಾರಾಂಶ

ಕೆ.ಎಲ್.ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್)ನ ಕೆ.ಎಲ್.ಇ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರು ಹಾಗೂ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾಗಿದ್ದ ಪ್ರೊ.ಸುನೀಲ ಎಸ್. ಜಲಾಲಪುರೆ ಅವರು ಕೆ.ಎಲ್.ಇ ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೆ.ಎಲ್.ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್)ನ ಕೆ.ಎಲ್.ಇ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರು ಹಾಗೂ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾಗಿದ್ದ ಪ್ರೊ.ಸುನೀಲ ಎಸ್. ಜಲಾಲಪುರೆ ಅವರು ಕೆ.ಎಲ್.ಇ ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

1998 ರಿಂದ ಕೆ.ಎಲ್.ಇ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು 2013ರಿಂದ ಆಜೀವ ಸದಸ್ಯರಾಗಿದ್ದಾರೆ. ಬೋಧನೆ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ 28 ವರ್ಷಗಳ ಅನುಭವ ಹೊಂದಿರುವ ಡಾ.ಜಲಾಲಪುರೆ ಅವರು 2025ರ ಗ್ಲೋಬಲ್‌ ಸೈಂಟಿಸ್ಟ್‌ ಇಂಡೆಕ್ಸ್ ನಲ್ಲಿ ವಿಶ್ವದ ಅಗ್ರ ಶೇ.5 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.ಯುಜಿಸಿ, ಎಐಸಿಟಿಇ, ಡಿಎಸ್‌ಟಿ, ಐಸಿಎಂಆರ್‌ ಹಾಗೂ ಡಿಬಿಟಿ ಸೇರಿದಂತೆ ವಿವಿಧ ಸಂಸ್ಥೆಗಳಿಂದ ₹4 ಕೋಟಿಗೂ ಅಧಿಕ ಸಂಶೋಧನಾ ಅನುದಾನ ಪಡೆದಿರುವ ಅವರು 195ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು, 8 ಪೇಟೆಂಟ್‌ಗಳು, 9 ಪಠ್ಯಪುಸ್ತಕಗಳು ಹಾಗೂ 4 ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. 60 ಸ್ನಾತಕೋತ್ತರ ಹಾಗೂ 30 ಪಿ.ಎಚ್.ಡಿ ಸಂಶೋಧಕರಿಗೆ ಮಾರ್ಗದರ್ಶನ ನೀಡಿರುವ ಅವರು ಎಐಸಿಟಿಇ ವಿಶ್ವೇಶ್ವರಯ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ 20ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ಉಪಾಧ್ಯಕ್ಷ ಬಸವರಾಜ ತಟವಟಿ, ಕಾರ್ಯಾಧ್ಯಕ್ಷ ಅಮಿತ್ ಕೋರೆ, ಕೆ.ಎಲ್.ಇ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕೆ.ಎಲ್.ಇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪ್ರಭಾಕರ ಕೋರೆ ಹಾಗೂ ಕುಲಪತಿ ಡಾ.ಸಂದೀಪ್ ಶ್ರೀವಾಸ್ತವ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಘಟಗಿಯರಂತೆ ದೇಶಭಕ್ತರಾದರೇ ಸಮೃದ್ಧ ರಾಷ್ಟ್ರ ನಿರ್ಮಾಣ
ಕೃಷ್ಣಾ ನದಿಗೆ 1.08 ಲಕ್ಷ ಕ್ಯುಸೆಕ್‌ ನೀರು