ಡಾ.ತಲ್ಲೂರುಗೆ ಬಂಟಕುಲ ರತ್ನ ಬಿರುದು ಪ್ರದಾನ, ಸನ್ಮಾನ

KannadaprabhaNewsNetwork |  
Published : Sep 03, 2024, 01:32 AM IST
ಬಂಟ2 | Kannada Prabha

ಸಾರಾಂಶ

ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘ ಇದರ ಉಡುಪಿ ತಾಲೂಕು ಸಮಿತಿ ವತಿಯಿಂದ ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯ್ಷಕಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಿ ಸನ್ಮಾನಿಸಲಾಯಿತು.ಸಮಿತಿ ವತಿಯಿಂದ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ನಡೆದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಇವರಿಂದ ಬಡಗುತಿಟ್ಟು ಯಕ್ಷಗಾನ ‘ಜ್ವಾಲಾ ಪ್ರತಾಪ’ ಪ್ರದರ್ಶನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಿತು.ಈ ಸಂದರ್ಭ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟ ಪೂರ್ವ ಸಂಚಾಲಕ ಜಯರಾಜ್ ಹೆಗ್ಡೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಭುಜಂಗ ಶೆಟ್ಟಿ, ಮಿಥುನ್ ಹೆಗ್ಡೆ, ಸುಭಾಸ್ ಬಲ್ಲಾಳ್, ಶ್ರೀಧರ ಶೆಟ್ಟಿ, ಇಂದಿರಾ ಸುಬ್ಬಯ್ಯ ಹೆಗ್ಡೆ, ನಿತೀಶ್ ಕುಮಾರ್ ಶೆಟ್ಟಿ, ಹರೀಶ್ ಚೆರ್ಕಾಡಿ, ಕಿಶೋರ್ ಶೆಟ್ಟಿ, ಪ್ರಸಾದ್ ಮಾರಾಳ್ಳಿ, ನಿರುಪಮಾ ಹೆಗ್ಡೆ ಹಾಗೂ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ಅವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ