ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯಲು ಡಾ. ರಾಯಚೂರುಕರ್ ಸಲಹೆ

KannadaprabhaNewsNetwork |  
Published : Sep 07, 2024, 01:36 AM IST
ಶಹಾಪುರ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

Dr. to get treatment for tuberculosis. Raichurukar advice

-ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಕಾರ್ಯಕ್ರಮ

------

ಕನ್ನಡಪ್ರಭ ವಾರ್ತೆ ಶಹಾಪುರ

ಕ್ಷಯರೋಗದ ಲಕ್ಷ್ಮಣಗಳು ಕಂಡು ಬಂದಲ್ಲಿ ತಾತ್ಸಾರ ಮಾಡದೆ ಕೂಡಲೇ ಅರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ರೋಗ ಮತ್ತಷ್ಟು ಮಾರಕವಾಗುವ ಸಾಧ್ಯತೆ ಹೆಚ್ಚಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಸಂಜೀವ ಕುಮಾರ್ ರಾಯಚೂರುಕರ್ ತಿಳಿಸಿದರು.

ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಪ್ರಧಾನಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಿಯಾದ ಚಿಕಿತ್ಸೆ ಪಡೆಯದಿದ್ದರೆ ಶ್ವಾಸಕೋಶ, ಮೆದುಳು, ಬೆನ್ನಮೂಳೆ ಭಾಗಗಳಿಗೆ ಹಾನಿಕಾರಕವಾಗುತ್ತದೆ. ಹಾಗಾಗಿ, ರೋಗವನ್ನು ಯಾವುದೇ ಹಂತದಲ್ಲಿಯೂ ಕಡೆಗಣಿಸಬಾರದು. ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕು ಎಂದರು.

ಕ್ಷಯ ರೋಗಕ್ಕೆ ಕಡ್ಡಾಯ 6 ತಿಂಗಳ ಚಿಕಿತ್ಸೆ ಪಡೆಯಬೇಕು. ಆದರೆ, ರೋಗಿಗಳು ಒಂದೆರಡು ತಿಂಗಳು ಚಿಕಿತ್ಸೆ ಪಡೆದು, ಲಕ್ಷಣಗಳು ಕಡಿಮೆಯಾದಂತೆ ಚೇತರಿಕೆಯಾಗಿದೆ ಎಂದು ಸ್ವಯಂ ಭಾವಿಸಿ ಪೂರ್ಣ ಪ್ರಮಾಣದ ಚಿಕಿತ್ಸೆಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದಾಗಿ ರೋಗ ಉಲ್ಬಣವಾಗುತ್ತಿದೆ. ಇನ್ನು ಬಹುತೇಕ ರೋಗಿಗಳು ಬಡತನ, ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿದ್ದು, ಈ ಅಂಶಗಳು ಕೂಡ ಭಾರತದಲ್ಲಿ ಕ್ಷಯ ರೋಗ ಹೆಚ್ಚಳಕ್ಕೆ ಕಾರಣವಾಗಿದೆ. ಕ್ಷಯ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೂ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, 2025ರ ವೇಳೆ ಕ್ಷಯ ರೋಗ ಮುಕ್ತ ಭಾರತ ನಿರ್ಮಾಣ ಗುರಿಯನ್ನು ಹೊಂದಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಡಾ. ಯಲ್ಲಪ್ಪ ಪಾಟೀಲ್ ಮಾತನಾಡಿ, ಕ್ಷಯ ರೋಗ ವಂಶಪಾರಂಪರವಾಗಿ ಬರುವುದಿಲ್ಲ. ಕ್ಷಯ ರೋಗದ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ರೋಗ ನಿವಾರಣೆಗೆ ಪರಿಶುದ್ಧ ವಾತಾವರಣದ ಜತೆಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕ್ಷಯ ರೋಗಿಗಳಿಗೆ 100 ಪ್ರೋಟೀನ್ ಯುಕ್ತ ಪೌಡರ್ ಡಬ್ಬಿಗಳನ್ನು ಅಶೋಕ್ ಕುಮಾರ್ ಅವರು ದೇಣಿಗೆ ರೂಪದಲ್ಲಿ ನೀಡಿದರು. ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ಗಂಗಾಧರ್ ಚಟ್ರಿಕಿ ಅವರು 20 ಆಹಾರ ಕಿಟ್ ಗಳನ್ನು ದೇಣಿಗೆಯಾಗಿ ನೀಡಿದರು.

ಆಸ್ಪತ್ರೆ ಹಿರಿಯ ವೈದ್ಯಾಧಿಕಾರಿ ಡಾ. ಗಂಗಾಧರ್ ಚಟ್ರಿಕಿ, ಮಂಜುನಾಥ್ ಎಡಿಸಿ ಯಾದಗಿರಿ, ಅಶೋಕ್ ಕುಮಾರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಪ್ಪ ಕಾಂಬಳೆ, ಸಂಗಣ್ಣ ನುಚ್ಚಿನ್, ಖಾಸಗಿ ಔಷಧಿ ವಿತರಕರ ಸಂಘದ ಅಧ್ಯಕ್ಷ ಅಯ್ಯನಗೌಡ ಇದ್ದರು.

-----

ಫೋಟೊ: 6ವೈಡಿಆರ್7: ಶಹಾಪುರ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಡಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ