ತುಂಗಾ ಮಹಾವಿದ್ಯಾಲಯದಲ್ಲೇ ಡಾ.ಯು.ಆರ್.ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪಿಸಿ: ಕಲ್ಲೂರು ಮೇಘರಾಜ

KannadaprabhaNewsNetwork |  
Published : May 24, 2026, 01:30 AM IST
ಪೋಟೋ: 23ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟೀ ಕಲ್ಲೂರು ಮೇಘರಾಜ ಮಾತನಾಡಿದರು.  | Kannada Prabha

ಸಾರಾಂಶ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಅವರ ಹೆಸರಿನಲ್ಲಿ ಆರಂಭವಾಗುವ ಅಧ್ಯಯನ ಪೀಠವನ್ನು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲೇ ಸ್ಥಾಪಿಸಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ ಆಗ್ರಹಿಸಿದರು.

ಶಿವಮೊಗ್ಗ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಅವರ ಹೆಸರಿನಲ್ಲಿ ಆರಂಭವಾಗುವ ಅಧ್ಯಯನ ಪೀಠವನ್ನು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲೇ ಸ್ಥಾಪಿಸಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಪೀಠವನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸುವುದಾಗಿ ಹೇಳಿದ್ದಾರೆ. ಅದು ಸ್ವಾಗತಾರ್ಹ. ಆದರೆ ಈ ಅಧ್ಯಯನ ಪೀಠವನ್ನು ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಂಗಾ ಮಹಾವಿದ್ಯಾಲಯದಲ್ಲಿಯೇ ಸ್ಥಾಪಿಸಬೇಕೆಂದು ನಮ್ಮ ಟ್ರಸ್ಟ್ ತಮ್ಮನ್ನು ಒತ್ತಾಯಿಸುತ್ತದೆ ಎಂದು ಪುನರುಚ್ಛರಿಸಿದರು.

ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಸಾಹಿತಿ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪುತ್ರ ಡಾ. ಯು. ಆರ್. ಅನಂತಮೂರ್ತಿಯವರ ಅಧ್ಯಯನ ಪೀಠವನ್ನು ಸ್ಥಾಪಿಸುವ ಮಂಜೂರಾತಿ ಪ್ರಕಟಿಸಿದ್ದರು. ಶಾಸಕ ಅರಗ ಜ್ಞಾನೇಂದ್ರ ನಿಯೋಗ ಡಾ. ಯು. ಆರ್. ಅನಂತಮೂರ್ತಿಯವರ ಅಧ್ಯಯನ ಪೀಠವನ್ನ ತೀರ್ಥಹಳ್ಳಿಯ ಪ್ರತಿಷ್ಠಿತ ತುಂಗಾ ಕಾಲೇಜಿನಲ್ಲಿಯೇ ಸ್ಥಾಪಿಸಬೇಕೆಂದು ಸಹ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿತ್ತು ಎಂದರು.

ಆದ್ದರಿಂದ ಅಧ್ಯಯನ ಪೀಠವನ್ನು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲೇ ಸ್ಥಾಪಿಸಬೇಕು. ಒಂದು ಪಕ್ಷ ಕುವೆಂಪು ವಿವಿಯಲ್ಲಿ ಸ್ಥಾಪಿಸಲು ಹೊರಟರೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಗೋಷ್ಠಿಯಲ್ಲಿ ಪ್ರಮುಖರಾದ ಎಚ್.ಎಂ. ಸಂಗಯ್ಯ, ಆದಿಲ್ ಖಾನ್, ಶಂಕ್ರಾನಾಯ್ಕ್, ಶಿವಣ್ಣ, ಜಗದೀಶ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರುಮೌಲ್ಯಮಾಪನ: ಪಿಯುಸಿಯಲ್ಲಿ ಅನನ್ಯಗೆ ಹೆಚ್ಚುವರಿ 6 ಅಂಕ
ಕಾರ್ಯಕರ್ತರು ಪಕ್ಷದ ಸಂಘಟನೆಗೆ ಮುಂದಾಗಬೇಕು: ಶಾಸಕಿ ಶಾರದಾ ಪೂರ್ಯಾನಾಯ್ಕ್