ಸ್ವಾಸ್ಥ್ಯ ಸಮಾಜಕ್ಕಾಗಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶ್ರಮ ಅಪಾರ

KannadaprabhaNewsNetwork |  
Published : Oct 17, 2025, 01:00 AM IST
ಹೊನ್ನಾಳಿ ಫೋಟೋ 16ಎಚ್.ಎಲ್.ಐ1 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಅಖಿಲ ಕರ್ನಾಟಕ ಜಾಗೃತಿ ವೇದಿಕೆಯಿಂದ ಪಟ್ಟಣದ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಗಣ್ಯರು ಇದ್ದರು. , | Kannada Prabha

ಸಾರಾಂಶ

ಕ್ಯಾನ್ಸರ್ ಕಾಯಿಲೆಗೂ ಚಿಕಿತ್ಸೆ ಇದೆ. ಆದರೆ ಕುಡಿತದ ಚಟ ಬಿಡಿಸಲಿಕ್ಕೆ ಚಿಕಿತ್ಸೆ ಇಲ್ಲದಂತಹ ಸಮಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಲಕ್ಷಾಂತರ ಮದ್ಯವ್ಯಸನಿಗಳಿಗೆ ಕುಡಿತದ ಚಟ ಬಿಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಅವರ ಶ್ರಮ ನಿಜಕ್ಕೂ ಶ್ಲಾಘನಿಯ. ಅದಕ್ಕಾಗಿಯೇ ಡಾ.ವೀರೇಂದ್ರ ಹೆಗ್ಗಡೆ ಅವರು ಪೂಜ್ಯನೀಯ ಸ್ಥಾನದಲ್ಲಿದ್ದಾರೆ ಎಂದು ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

- ಗಾಂಧಿಸ್ಮೃತಿ ಕಾರ್ಯಕ್ರಮದಲ್ಲಿ ಶಾಸಕ ಡಾ.ಶಾಂತನಗೌಡ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಕ್ಯಾನ್ಸರ್ ಕಾಯಿಲೆಗೂ ಚಿಕಿತ್ಸೆ ಇದೆ. ಆದರೆ ಕುಡಿತದ ಚಟ ಬಿಡಿಸಲಿಕ್ಕೆ ಚಿಕಿತ್ಸೆ ಇಲ್ಲದಂತಹ ಸಮಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಲಕ್ಷಾಂತರ ಮದ್ಯವ್ಯಸನಿಗಳಿಗೆ ಕುಡಿತದ ಚಟ ಬಿಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಅವರ ಶ್ರಮ ನಿಜಕ್ಕೂ ಶ್ಲಾಘನಿಯ. ಅದಕ್ಕಾಗಿಯೇ ಡಾ.ವೀರೇಂದ್ರ ಹೆಗ್ಗಡೆ ಅವರು ಪೂಜ್ಯನೀಯ ಸ್ಥಾನದಲ್ಲಿದ್ದಾರೆ ಎಂದು ಡಿ.ಜಿ. ಶಾಂತನಗೌಡ ಹೇಳಿದರು.

ಪಟ್ಟಣದ ಹಿರೇಕಲ್ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಗಾಂಧಿಸ್ಮೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಶಿಬಿರದ ಮೂಲಕ ಲಕ್ಷಾಂತರ ಮಂದಿ ಮದ್ಯಪಾನ ತೊರೆದು ತಮ್ಮ ಕುಟುಂಬದ ಜತೆ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಇದೊಂದು ಅದ್ಭುತ ಕಾರ್ಯ ಹಾಗೂ ಈಶ್ವರನ ಸೇವೆ ಎಂದು ತಿಳಿಯಬೇಕು. 33 ಇಲಾಖೆಗಳಲ್ಲಿ ಮಾಡಬೇಕಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆ ಮೂಲಕ ಸಾರ್ವಜನಿಕರಿಗೆ ತಲುಪಿಸುವಂತ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸರ್ಕಾರದ ಪರವಾಗಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಮದ್ಯ ಕುಡಿದರೆ ಹಣ, ಕುಟುಂಬದ ನೆಮ್ಮದಿ ಹಾಳು ಎಂಬ ಅರಿವು ಇರಬೇಕು. ಡಾ.ವೀರೇಂದ್ರ ಹೆಗ್ಗಡೆ ಅವರು ಮದ್ಯಪಾನ ನಿಷೇಧ ಮಾಡಿ ಎಂದು ಇದುವರೆವಿಗೂ ಬಂದ ಎಲ್ಲಾ ಸರ್ಕಾರಗಳಿಗೂ ಮನವಿ ಮಾಡಿದ್ದರು. ಆದರೆ ಯಾವುದೇ ಸರ್ಕಾರಗಳು ಮದ್ಯಪಾನ ನಿಷೇಧ ಮಾಡದಿದ್ದಾಗ ತಾವೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮದ್ಯವರ್ಜನ ಶಿಬಿರಗಳನ್ನು ಏರ್ಪಡಿಸುತ್ತಿದ್ದಾರೆ. ಕುಡಿತದಿಂದ ಮನೆ, ಬಂಧುಗಳ ಕಳೆದುಕೊಂಡಿದ್ದ ಲಕ್ಷಾಂತರ ಜನರಿಗೆ ಮದ್ಯವ್ಯಸನದಿಂದ ಮುಕ್ತಗೊಳಿಸಿ ಅವರ ಜೀವನಕ್ಕೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇದುವರೆಗೂ 2 ಸಾವಿರ ಮದ್ಯವರ್ಜನ ಶಿಬಿರಗಳು ನಡೆದಿದ್ದು, 1.30 ಲಕ್ಷ ಜನ ಕುಡಿತದ ಚಟದಿಂದ ದೂರವಾಗಿ ನವಜೀವನಕ್ಕೆ ಕಾಲಿಟ್ಟಿದ್ದಾರೆ. 2 ಸಾವಿರ ಶಿಬಿರದಲ್ಲಿ 2 ಶಿಬಿರಗಳು ತಮ್ಮ ಶ್ರೀಮಠದಲ್ಲೇ ನಡೆಸಿಕೊಟ್ಟೆವು ಎಂದು ಸ್ವಾಮೀಜಿ ತಿಳಿಸಿದರು.

ಸರ್ಕಾರಿ ಶಾಲೆ ಮುಖೋಪಾಧ್ಯಾಯಿನಿ ರತ್ನಮ್ಮ ಗಾಂಧೀಜಿ ಬಗ್ಗೆ, ಜಿಲ್ಲಾ ಯೋಜನಾಧಿಕಾರಿ ಲಕ್ಷ್ಮಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೊಸಕೇರಿ ಸುರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುರಸಭೆ ಅಧ್ಯಕ್ಷ ಮೈಲಪ್ಪ, ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ನಟರಾಜ್, ಕತ್ತಿಗೆ ನಾಗರಾಜ್, ಮಂಜುನಾಥ್ ಸರಳಿನಮನೆ, ಬಿ.ಎಲ್.ಕುಮಾರಸ್ವಾಮಿ, ಶ್ರೀನಿವಾಸ್‌ ರಾವ್, ಲಿಂಗರಾಜ್, ರುದ್ರೇಶ್, ರಮೇಶ್, ಯೋಗಿತ ಗೌಡ ಹಾಗೂ ತಾಲೂಕು ಯೋಜನಾಧಿಕಾರಿ ಶಾಂತರಾಮ್ ಇತರರು ಇದ್ದರು.

- - -

-16ಎಚ್.ಎಲ್.ಐ1:

ಗಾಂಧಿಸ್ಮೃತಿ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು. ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ, ಇತರ ಗಣ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌