ಡಾ.ವೈ.ಸುಬ್ರಾಯ ಭಟ್‌ಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ನಾಳೆ

KannadaprabhaNewsNetwork |  
Published : Apr 11, 2025, 12:33 AM IST
ಫೋಟೋ:  ೧೦ಪಿಟಿಆರ್-ಸುಬ್ರಾಯ ಭಟ್ | Kannada Prabha

ಸಾರಾಂಶ

ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಪುತ್ತೂರಿನ ಖ್ಯಾತ ವೈದ್ಯ ಡಾ. ವೈ.ಸುಬ್ರಾಯ ಭಟ್‌ ಆಯ್ಕೆಯಾಗಿದ್ದಾರೆ. ಶನಿವಾರ ಸಂಜೆ ಭಾಸ್ಕರ ಬಾರ್ಯರ ಪರ್ಲಡ್ಕ ನಿವಾಸ ‘ಅಗಸ್ತ್ಯ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಪುತ್ತೂರಿನ ಖ್ಯಾತ ವೈದ್ಯ ಡಾ. ವೈ.ಸುಬ್ರಾಯ ಭಟ್‌ ಆಯ್ಕೆಯಾಗಿದ್ದಾರೆ. ಶನಿವಾರ ಸಂಜೆ ಭಾಸ್ಕರ ಬಾರ್ಯರ ಪರ್ಲಡ್ಕ ನಿವಾಸ ‘ಅಗಸ್ತ್ಯ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

೮೫ ವರ್ಷ ಪ್ರಾಯದ ಡಾ. ವೈ. ಸುಬ್ರಾಯ ಭಟ್ಟರು ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞರಾಗಿದ್ದಾರೆ. ಸರ್ಕಾರಿ ಸೇವೆಯ ಮೂಲಕ ವೈದ್ಯಕೀಯ ಕ್ಷೇತ್ರವನ್ನು ಪ್ರವೇಶಿಸಿದ ಅವರು ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದು, ೧೯೯೩ರಿಂದ ಪುತ್ತೂರಿನಲ್ಲಿ ಸೇವಾ ನಿರತರಾಗಿದ್ದಾರೆ. 50 ಸಾವಿರಕ್ಕೂ ಅಧಿಕ ಹೆರಿಗೆ, 20 ಸಾವಿರಕ್ಕೂ ಅಧಿಕ ಉದರ ದರ್ಶಕ ಶಸ್ತ್ರ ಚಿಕಿತ್ಸೆಯನ್ನು ಮಾಡಿರುವುದು ಇವರ ಹೆಗ್ಗಳಿಕೆ.

ಬಾರ್ಯ ಪ್ರತಿಷ್ಠಾನದ ವತಿಯಿಂದ ಈ ಹಿಂದೆ ಬ್ರಹ್ಮಶ್ರೀ ದಿ.ಕೆಮ್ಮಿಂಜೆ ಕೇಶವ ತಂತ್ರಿ, ದಿ.ಡಾ.ಶೇಣಿ ಗೋಪಾಲಕೃಷ್ಣ ಭಟ್, ದಿ.ರಾಮದಾಸ ಸಾಮಗ, ದಿ.ಬಾರ್ಯ ಜಯಕೀರ್ತಿ ಬುಣ್ಣು, ದಿ.ಚಂದು ಮೇಸ್ತ್ರಿ, ದಿ.ನಾಟಿವೈದ್ಯೆ ಅಕ್ಕು ಹೆಂಗ್ಸು, ಪಾಕಶಾಸ್ತ್ರಜ್ಞ ದಿ.ಶ್ರೀನಿವಾಸ ಭಟ್, ಸರಾಫ್ ರಾಮಚಂದ್ರ ಆಚಾರ್ಯ, ಸಂಗೀತ ಸಾಧಕ ಕುದ್ಮಾರು ವೆಂಕಟ್ರಮಣ ಭಟ್, ಅಧ್ಯಾಪಕ ದಿ. ವಾಸುದೇವ ಮಯ್ಯ, ವೈದ್ಯ ಡಾ.ಜೆ.ಸಿ.ಅಡಿಗ, ಬರೆಪ್ಪಾಡಿ ದಿ.ಅನಂತಕೃಷ್ಣ ಭಟ್, ಉಮೇಶ ಶೆಣೈ, ಸಹಕಾರಿ ದಿ.ನಿರಂಜನ ಕುಮಾರ್, ಪ್ರೊ.ವೇದವ್ಯಾಸ, ಕೆಯ್ಯೂರು ನಾರಾಯಣ ಭಟ್, ಫಿಲೋಮಿನಾ ಇ. ಬ್ರೆಗ್ಸ್, ವೇ.ಮೂ.ಹರೀಶ್ ಉಪಾಧ್ಯಾಯ, ಪೂಕಳ ಲಕ್ಷ್ಮೀ ನಾರಾಯಣ ಭಟ್, ರಾಮಕೃಷ್ಣ ಮಿತ್ಯಾಂತ, ಮೂಡಾಯೂರು ಚಂದ್ರಶೇಖರ ದೇವಾಡಿಗ, ಕರಾಯ ಲಕ್ಷ್ಮಣ ಶೆಟ್ಟಿ ಮತ್ತು ವೇ.ಮೂ.ಸುಬ್ರಹ್ಮಣ್ಯ ತಂತ್ರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''