ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ

KannadaprabhaNewsNetwork |  
Published : Nov 01, 2024, 12:08 AM IST
ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ. | Kannada Prabha

ಸಾರಾಂಶ

Draft voter list of assembly constituencies published

-ಅಂತಿಮ ಮತದಾರರ ಪಟ್ಟಿಯನ್ನು 2025ರ ಜನವರಿ 6 ರಂದು ಪ್ರಕಟಿಸಲಾಗುವುದು

-------

ಕನ್ನಡಪ್ಭ ವಾರ್ತೆ ಯಾದಗಿರಿ

ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 36-ಶೋರಾಪೂರ, 37-ಶಹಾಪೂರ, 38-ಯಾದಗಿರಿ ಹಾಗೂ 39-ಗುರುಮಠಕಲ್ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅ. 29 ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ, ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಕಾರ್ಯಾಲಯ ಯಾದಗಿರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ತಹಸೀಲ್ದಾರರ ಕಾರ್ಯಾಲಯ ಯಾದಗಿರಿ, ಶಹಾಪುರ, ಶೋರಾಪೂರ, ವಡಗೇರಾ, ಗುರುಮಿಟಕಲ್ ಮತ್ತು ಹುಣಸಗಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿಯನ್ನು (http://ceokarnataka.kar.nic.in) ಹಾಗೂ ಜಿಲ್ಲೆಯ (yadgir.nic.in) ಅಂತರ್ಜಾಲದಲ್ಲಿಯು ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯದ Facebookನ (dcydg123@gmail.com)ನಲ್ಲಿಯೂ ಸಹ ಪರಿಶೀಲಿಸಬಹುದಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು.

ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಅವರುಗಳು ಸ್ಥಳಾಂತರ ಹೊಂದಿದ್ದಲ್ಲಿ, ಮೃತ ಹೊಂದಿದ್ದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಅವರುಗಳ ಹೆಸರನ್ನು ತೆಗೆದು ಹಾಕಲು ನಮೂನೆ-7 ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8 ರಲ್ಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಒ) ಅವರಿಗೆ ಅ.29 ರಿಂದ ನ.28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಡಿಸೆಂಬರ್ 24 ರಂದು ಕಾಲೋಚಿತ ಗೊಳಿಸಲಾಗುವುದು. ನಂತರ ಅಂತಿಮ ಮತದಾರರ ಪಟ್ಟಿಯನ್ನು 2025ರ ಜನವರಿ 6 ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

-----

30ವೈಡಿಆರ್‌18 : ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ