ನಾಟಕಗಳು ಯುವಜನತೆಗೆ ದಾರಿದೀಪ: ಡಾ.ಮಂಜುನಾಥ ಕೋಟ್ಯಾನ್

KannadaprabhaNewsNetwork |  
Published : Jan 21, 2025, 12:33 AM IST
20ನಾಟಕ | Kannada Prabha

ಸಾರಾಂಶ

ಕೋಟಿ ಚೆನ್ನಯ ಥೀಮ್‌ ಪಾರ್ಕ್‌ನ ಬಯಲು ರಂಗಮಂದಿರದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಕಲ್ಲರಳಿ ಹೂವಾಗಿ-ಮೂರು ದಿನದ ಮಕರಾಯನ ನಾಟಕೋತ್ಸವ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳಪ್ರಸ್ತುತ ಕಾಲಘಟ್ಟದಲ್ಲಿ ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಜನತೆಯ ಬದುಕಿಗೆ ದಾರಿದೀಪವಾಗುತ್ತವೆ ಮತ್ತು ಮುಂದಿನ ಪೀಳಿಗೆಯ ಭವಿಷ್ಯದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಕೋಟ್ಯಾನ್ ಹೇಳಿದರು.ಅವರು ಭಾನುವಾರ ಇಲ್ಲಿನ ಕೋಟಿ ಚೆನ್ನಯ ಥೀಮ್‌ ಪಾರ್ಕ್‌ನ ಬಯಲು ರಂಗಮಂದಿರದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಲಾದ ಕಲ್ಲರಳಿ ಹೂವಾಗಿ-ಮೂರು ದಿನದ ಮಕರಾಯನ ನಾಟಕೋತ್ಸವವನ್ನು ಜಂಬೆ ವಾದ್ಯ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.ನಾಟಕ, ಭಾಷೆ, ಕನ್ನಡ ಹಾಗೂ ಸಂಸ್ಕೃತಿಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳಬೇಕು. ನಾಟಕಗಳು ವ್ಯಕ್ತ-ಅವ್ಯಕ್ತ, ದೃಶ್ಯ-ಅದೃಶ್ಯ ಮತ್ತು ಶ್ರಾವ್ಯ-ಅಶ್ರಾವ್ಯವನ್ನು ಉದ್ದೀಕರಿಸುತ್ತವೆ. ಇಂದಿನ ಯುವಕರು ಪಠ್ಯದ ಹೊರತು ಯೋಚಿಸಿ, ಕನ್ನಡ ನಾಟಕಗಳನ್ನು ನೋಡಿ ಮನದಟ್ಟು ಮಾಡಿಕೊಂಡರೆ ಸಮಾಜಕ್ಕೆ ಉತ್ತಮ ಪ್ರಜೆಯಾಗುವುದರಲ್ಲಿ ಸಂಶಯವೇ ಇಲ್ಲ ಎಂದ ಅವರು, ಯು.ಆರ್.ಅನಂತಮೂರ್ತಿ ಮತ್ತು ಗಿರೀಶ್ ಕಾರ್ನಾಡ್ ಅವರಂತಹ ವ್ಯಕ್ತಿಗಳು ಕೂಡ ನಾಟಕ ರಂಗವನ್ನು ಪ್ರೊತ್ಸಾಹಿಸುವುದರ ಜೊತೆಗೆ ನಾಟಕಗಳ ಕುರಿತು ಬಹಳ ಆಸಕ್ತಿ ಹೊಂದಿದ್ದರು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಕ್ಷ ರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಮಾತನಾಡಿ, ಯಕ್ಷಗಾನದ ಜೊತೆಗೆ ನಾಟಕಗಳು ಕೂಡ ಜೀವನದಲ್ಲಿ ಜ್ಞಾನವನ್ನು ನೀಡುತ್ತವೆ. ಈ ನಾಟಕೋತ್ಸವದಲ್ಲಿ ಬಹಳಷ್ಟು ಜನ ಉತ್ತರ ಕರ್ನಾಟಕದ ಕಲಾವಿದರು ಭಾಗವಹಿಸಿದ್ದಾರೆ ಹಾಗೂ ಅವರು ತಮ್ಮ ಜವಾರಿ ಭಾಷೆಯ ವಿಡಂಬನೆಯನ್ನು ಅರ್ಥೈಸಲಿದ್ದಾರೆ. ನಾಟಕಗಳನ್ನು ನೋಡುವ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ನಿರ್ದಿಗಂತ ಸಂಸ್ಥೆಯ ವ್ಯವಸ್ಥಾಪಕ ಗಣೇಶ್ ಭೀಮನಕೋಟೆ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮತ್ತು ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ವಸಂತ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ