ಕನ್ನಡಪ್ರಭ ವಾರ್ತೆ ಮದ್ದೂರು
ರಾಜ್ಯದ ಪ್ರಮುಖ ಬೆಳೆಗಳಲ್ಲಿ ಕಬ್ಬು ಸಹ ಒಂದು. ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರದ ಬೆಲೆ, ಕಟಾವು ಕೂಲಿ ದರ, ಸಾಗಾಣಿಕೆ ವೆಚ್ಚ ಸೇರಿದಂತೆ ಇನ್ನಿತರೆ ವೆಚ್ಚಗಳು ಹೆಚ್ಚಾಗಿ ರೈತ ಬೆಳೆದ ಕಬ್ಬಿನ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಸಾಲದ ಶೂಲಕ್ಕೆ ಸಿಕ್ಕಿ ಆತ್ಮಹತ್ಯೆ ದಾರಿ ಹಿಡಿಯಲು ಮುಂದಾಗಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.
ಸಕ್ಕರೆ ಕಾರ್ಖಾನೆ ಮಾಲೀಕರು ಸಹ ಕಾರ್ಖಾನೆಗೆ ಸರಬರಾಜು ಮಾಡಿದ ಕಬ್ಬಿಗೆ ಸಮಯಕ್ಕೆ ಸರಿಯಾಗಿ ಹಣ ಪಾವತಿ ಮಾಡುತ್ತಿಲ್ಲ. ಕಾರ್ಖಾನೆ ಮಾಲೀಕರನ್ನು ಕೇಳಿದರೆ ಕೇಂದ್ರ ಸರ್ಕಾರ ಸಕ್ಕರೆ ಬೆಲೆ ಹೆಚ್ಚಳ ಮಾಡದ ಕಾರಣ ಕಬ್ಬಿಗೆ ಹೆಚ್ಚಿನ ದರ ನಿಗದಿ ಮಾಡಲು ಸಾಧ್ಯವಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.ರೈತ ಮುಖಂಡರಾದ ಯರಗನಹಳ್ಳಿ ರಾಮಕೃಷ್ಣಯ್ಯ, ಆರ್.ಎಸ್. ಸೀತಾರಾಮ, ಅಣ್ಣೂರು ಮಹೇಂದ್ರ, ಕೀಳಘಟ್ಟ ನಂಜುಂಡಯ್ಯ, ಸೋಶಿ ಪ್ರಕಾಶ್, ವಳೆಗೆರೆಹಳ್ಳಿ ಶ್ರೀನಿವಾಸ್, ಕೋಣಸಾಲೆ ಲಿಂಗಯ್ಯ, ದೇವರಾಜು ಸೇರಿದಂತೆ ಹಲವು ಮುಖಂಡರು ಇದ್ದರು.