ಕುಡಿಯುವ ನೀರಿಗೆ ಸಮಸ್ಯೆ : ಬಿಟ್ಟಗೌಡನಹಳ್ಳಿ ನಿವಾಸಿಗಳ ಪ್ರತಿಭಟನೆ

KannadaprabhaNewsNetwork |  
Published : Jan 18, 2024, 02:00 AM IST
17ಎಚ್ಎಸ್ಎನ್20 : ತಲೆ ಮೇಲೆ ಖಾಲಿ ಕೊಡ ಹೊತ್ತು ಪ್ರತಿಭಟನೆ ನಡೆಸಿದ ಬಿಟ್ಟಗೌಡನಹಳ್ಳಿ ಮಹಿಳೆಯರು. | Kannada Prabha

ಸಾರಾಂಶ

ಕಳೆದ ಆರೇಳು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೂಡಲೇ ನೀರಿನ ಸಂಪರ್ಕ ಒದಗಿಸಿಕೊಡುವಂತೆ ಆಗ್ರಹಿಸಿ ಬಿಟ್ಟಗೌಡನಹಳ್ಳಿ ಗ್ರಾಮಸ್ಥರು ಬುಧವಾರ ಡಿಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ ಕಳೆದ ಆರೇಳು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೂಡಲೇ ನೀರಿನ ಸಂಪರ್ಕ ಒದಗಿಸಿಕೊಡುವಂತೆ ಆಗ್ರಹಿಸಿ ಬಿಟ್ಟಗೌಡನಹಳ್ಳಿ ಗ್ರಾಮಸ್ಥರು ಬುಧವಾರ ಡಿಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಬಿಟ್ಟಗೌಡನಹಳ್ಳಿ ನಿವಾಸಿಗಳಾದ ಮೊಗಣ್ಣಗೌಡ ಮತ್ತು ಜ್ಯೋತಿ ಮಾಧ್ಯಮದೊಂದಿಗೆ ಮಾತನಾಡಿ, ಇದುವರೆವಿಗೂ ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಲೇ ಇದ್ದು, ಇದಕ್ಕೆ ಮುಖ್ಯ ಕಾರಣ ಈ ಹಿಂದೆ ಬೋರ್‌ವೆಲ್ ಮೂಲಕ ಕುಡಿಯುವ ನೀರಿನ ವ್ಯವಸ್ತೆ ಮಾಡಲಾಗುತ್ತಿತ್ತು. ಆದರೆ ಇದೀಗ ಎಲ್ಲಾ ಬೋರ್ ವೆಲ್‌ಗಳಲ್ಲಿಯೂ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಸಧ್ಯದಲ್ಲಿ ೪-೫ ದಿನಗಳಿಗೆ ಒಮ್ಮೆ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದು ಯಾವುದಕ್ಕೂ ಸಾಲದಾಗಿದೆ ಎಂದರು. ಕಳೆದ ೬-೭ ತಿಂಗಳಿಂನಿಂದಲಂತೂ ಹೇಳತೀರದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹಲವಾರು ಬಾರಿ ಸಂಬಂಧಿಸಿದವರಿಗೆ ತಿಳಿಸಿದರೂ ಸಹ ಪ್ರಯೋಜನ ವಾಗಿರುವುದರಿಲ್ಲ. ಹಾಲಿ ನಮ್ಮ ಗ್ರಾಮಕ್ಕೆ ಅಮೃತ್ ಯೋಜನೆಯಡಿಯಲ್ಲಿ ಪೈಪು ಅಳವಡಿಸಿದ್ದು, ಇದರ ಮೂಲಕವಾದರೂ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ವಿನಂತಿಸಿದರು. ತಾವುಗಳು ದಯಮಾಡಿ ಶೀಘ್ರವಾಗಿ ತಕ್ಷಣವೇ ನಮ್ಮ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಸಿಕೊಟ್ಟು ನಮ್ಮ ಗ್ರಾಮದ ಜನತೆಗೆ ಕುಡಿಯುವ ನೀರಿನ ತೊಂದರೆಯನ್ನು ತಪ್ಪಿಸಬೇಕೆಂದು ವಿನಂತಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್, ಗ್ರಾಮದ ಮುಖಂಡರಾದ ಮೊಗಣ್ಣಗೌಡ, ಲೋಕೇಶ್, ಸುಶೀಲಮ್ಮ, ಸುರೇಶ್, ಗೀತಾ, ಜ್ಯೋತಿ, ಮಾನಸ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ