ಕುಡಿಯುವ ನೀರು ವ್ಯವಸ್ಥೆಗಾಗಿ ₹1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಶಾಸಕ ಮಂಜುನಾಥ್‌

KannadaprabhaNewsNetwork |  
Published : Aug 26, 2026, 02:15 AM IST
ಹನೂರು ಪಟ್ಟಣದ ಕುಡಿಯುವ ನೀರಿಗೆ ಶಾಶ್ವತ ಪರಿಹಾರ: ಒಂದು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ.... | Kannada Prabha

ಸಾರಾಂಶ

ಪಟ್ಟಣದ ಜನತೆಯನ್ನು ದಶಕಗಳಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಒಟ್ಟು ಒಂದು ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಪಟ್ಟಣದ ಜನತೆಯನ್ನು ದಶಕಗಳಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಒಟ್ಟು ಒಂದು ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ಪಟ್ಟಣದ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಜಾಕ್‌ವೆಲ್ ಮೋಟಾರ್‌ಗಳ ಅಳವಡಿಸುವ ಸಂಬಂಧ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಇದರಲ್ಲಿ ಹರಳೆ, ಸಿದ್ದಯ್ಯನಪುರ ಜಾಕ್‌ವೆಲ್‌ನಲ್ಲಿ 67 ಲಕ್ಷ ರು. ವೆಚ್ಚದಲ್ಲಿ ಅತ್ಯಾಧುನಿಕ ಹೊಸ ಮೋಟಾರ್ ಅಳವಡಿಕೆ ಹಾಗೂ 33 ಲಕ್ಷ ರು. ವೆಚ್ಚದಲ್ಲಿ ನೀರು ಶುದ್ಧೀಕರಣ ಯಂತ್ರಗಳ ಬದಲಾವಣೆ ಕಾಮಗಾರಿ ಸೇರಿದೆ ಎಂದರು.

ಹನೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪ್ರಮುಖ ಮೂಲವಾದ ಹರಳೆ, ಸಿದ್ದಯ್ಯನಪುರ ಜಾಕ್‌ವೆಲ್‌ನಲ್ಲಿ ಹೊಸ ಮೋಟಾರ್ ಅಳವಡಿಕೆಯ ಕಾಮಗಾರಿ ಭರದಿಂದ ಸಾಗಿದ್ದು, ಈ ಕಾರಣದಿಂದಾಗಿ ಸದ್ಯಕ್ಕೆ ಹನೂರು ಪಟ್ಟಣಕ್ಕೆ ಕಾವೇರಿ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು ಕೊಳವೆಬಾವಿ ಹಾಗೂ ಟ್ಯಾಂಕರ್ ನೀರನ್ನು ಮಿತವಾಗಿ ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹನೂರಿಗೆ ಕಲ್ಪಿಸಲಾಗಿತ್ತು. ಅಂದಿನಿಂದ ಎರಡು ಮೋಟಾರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿತ್ತು. ಆದರೆ ಒಂದು ಮೋಟಾರ್ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿತ್ತು. ಚಾಲ್ತಿಯಲ್ಲಿದ್ದ 60 ಎಚ್.ಪಿ ಸಾಮರ್ಥ್ಯದ ಮತ್ತೊಂದು ಮೋಟಾರ್ ಕೂಡ ಪದೇ ಪದೇ ರಿಪೇರಿಗೆ ಬರುತ್ತಿದ್ದರಿಂದ ಪಟ್ಟಣ ಪಂಚಾಯಿತಿಯು ಲಕ್ಷಾಂತರ ರೂಪಾಯಿ ಪಾವತಿಸಬೇಕಾಗಿತ್ತು ಎಂದರು.

ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ 67 ಲಕ್ಷ ರು. ವೆಚ್ಚದಲ್ಲಿ ಹೊಸ ಮೋಟಾರ್ ಖರೀದಿಸಿ ಅಳವಡಿಸಲಾಗುತ್ತಿದೆ. ಈ ಮೋಟಾರ್ ಅಳವಡಿಕೆ ಕಾಮಗಾರಿ ಸೆ. 2 ರವರೆಗೆ ನಡೆಯಲಿದೆ. ಅಲ್ಲಿಯವರೆಗೆ ಪಟ್ಟಣದ ನಾಗರಿಕರು ಸಹಕರಿಸಬೇಕು, ಯಾವುದೇ ವಾರ್ಡ್‌ನಲ್ಲಿ ನೀರಿನ ಮೂಲ ಇಲ್ಲದಿದ್ದರೆ ಪಟ್ಟಣ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಪಡೆಯಬಹುದು ಎಂದರು.

₹33 ಲಕ್ಷದಲ್ಲಿ ಶುದ್ಧೀಕರಣ ಘಟಕದ ಅಭಿವೃದ್ಧಿ:

ಕಾವೇರಿ ನದಿಯಿಂದ ಹರಳೆ ಜಾಕ್‌ವೆಲ್ ಮೂಲಕ ಸಿದ್ದಯ್ಯನಪುರಕ್ಕೆ ನೀರು ಪೂರೈಕೆಯಾಗಿ ಅಲ್ಲಿ ಶುದ್ಧೀಕರಿಸಿದ ನಂತರವೇ ಹನೂರು ಪಟ್ಟಣಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಾಕ್‌ವೆಲ್ ಕಟ್ಟಡಗಳ ನವೀಕರಣ ಹಾಗೂ ನೀರುಗಂಟಿಗಳಿಗೆ ವಸತಿಗೃಹ:

ಹರಳೆ ಮತ್ತು ಸಿದ್ದಯ್ಯನಪುರ ಗ್ರಾಮಗಳಲ್ಲಿರುವ ಜಾಕ್‌ವೆಲ್ ಕಟ್ಟಡಗಳು ಹಳೆಯದಾಗಿದ್ದು, ಅವುಗಳನ್ನೂ ಸಹ ನವೀಕರಣ ಮಾಡಲಾಗುವುದು. ಹರಳೆ ಜಾಕ್‌ವೆಲ್‌ನಲ್ಲಿ ಹಗಲಿರುಳು ದುಡಿಯುವ ನೀರುಗಂಟಿಗಳ (ವಾಟರ್‌ಮೆನ್) ಅನುಕೂಲಕ್ಕಾಗಿ ವಸತಿಗೃಹಗಳನ್ನು ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದರಿಯಾದ ಪದವಿ ರೈತನ ಕೃಷಿ ಕಾಯಕ
ವೈಯಕ್ತಿಕ ಕಾಮಗಾರಿ ಸದುಪಯೋಗ ಪಡೆಯಿರಿ:ಯಂಕಂಚಿ