ಭೂದಾಖಲೆಗಳ ಡಿಜಿಟಲೀಕರಣ ಕಾರ್ಯಕ್ಕೆಸಚಿವ ಶಿವಾನಂದ ಪಾಟೀಲ ಚಾಲನೆ

KannadaprabhaNewsNetwork |  
Published : Jan 06, 2025, 01:00 AM IST
5ಎಚ್‌ವಿಆರ್2 | Kannada Prabha

ಸಾರಾಂಶ

ತಾಲೂಕು ಕಚೇರಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು.

ಹಾವೇರಿ: ತಾಲೂಕು ಕಚೇರಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಸಚಿವರಿಗೆ ಮಾಹಿತಿ ನೀಡಿ, ಭೂಸುರಕ್ಷಾ ಯೋಜನೆಯಡಿಯಲ್ಲಿ ಇಲಾಖೆಯ ಹಳೆಯ ಭೂದಾಖಲೆಗಳ ಗಣಕೀಕರಣದಿಂದ ದಾಖಲೆಗಳ ಸುರಕ್ಷತೆ ಮತ್ತು ಸುಲಭ ಲಭ್ಯತೆ ಆಗಲಿದೆ. ಜಿಲ್ಲೆಯಲ್ಲಿ ಭೂದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಈಗಾಗಲೇ ಹಾನಗಲ್ಲ ತಾಲೂಕು ಪೈಲಟ್ (ಪ್ರಾಯೋಗಿಕ) ತಾಲೂಕನ್ನಾಗಿ ತೆಗೆದುಕೊಂಡು ಈ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಈಗ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಇನ್ನುಳಿದ ತಾಲೂಕುಗಳಲ್ಲಿ ಸೋಮವಾರದಿಂದ ಪ್ರಾರಂಭಿಸಲಾವುದು ಎಂದು ತಿಳಿಸಿದರು.

ಸಾರ್ವಜನಿಕರಿಗೆ ಈ ಕಾರ್ಯದಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಭೂದಾಖಲೆಗಳ ಡಿಜಿಟಲೀಕರಣ ತ್ವರಿತ ಸರಳ ಆಡಳಿತ, ಭೂದಾಖಲೆಗಳನ್ನು ತಿದ್ದಲು ಮತ್ತು ಕಳೆಯಲು ಅಸಾಧ್ಯ. ಸುಲಭವಾಗಿ ಕಡಿಮೆ ಸಮಯದಲ್ಲಿ ದಾಖಲೆಗಳ ಲಭ್ಯತೆ, ದಾಖಲೆಗಳು ಸುಭದ್ರ ಮತ್ತು ಶಾಶ್ವತವಾಗಿ ಸಂರಕ್ಷಣೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಭೂಸುರಕ್ಷಾ ಯೋಜನೆಯಡಿಯಲ್ಲಿ ಭೂದಾಖಲೆಗಳ ಡಿಜಿಟಲೀಕರಣ ಕಾರ್ಯಕ್ಕೆ ತಾಲೂಕಿನಲ್ಲಿ ಒಟ್ಟು ಆರು ನುರಿತ ಕಂಪ್ಯೂಟರ್‌ ಅಪರೇಟರ್‌ಗಳಿಗೆ ತರಬೇತಿ ನೀಡಿ, ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗಿದೆ. ತಾಲೂಕಿನ ಕಚೇರಿಯಲ್ಲಿ ಒಟ್ಟು ಸುಮಾರು 27 ಸಾವಿರ ಕಡತಗಳು ಮತ್ತು ರಜಿಸ್ಟರ್‌ಗಳು ಭೂಸುರಕ್ಷಾ ಯೋಜನೆಯಡಿ ಡಿಜಿಟಲೀಕರಣಕ್ಕೆ ಒಳಪಡುತ್ತವೆ ಎಂಬ ಮಾಹಿತಿಯನ್ನು ಸಚಿವರಿಗೆ ನೀಡಿದರು.

ಶಾಸಕ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಜಿಪಂ ಸಿಇಒ ಅಕ್ಷಯ ಶ್ರೀಧರ, ಪೊಲೀಸ್ ಅಧೀಕ್ಷಕ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್, ಉಪ ವಿಭಾಗಾಧಿಕಾರಿ ಚನ್ನಪ್ಪ, ತಹಸೀಲ್ದಾರ್ ಶರಣಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!