ಶಹಾಪುರದಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯಕ್ಕೆ ಚಾಲನೆ

KannadaprabhaNewsNetwork |  
Published : May 20, 2024, 01:36 AM IST
ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಪ್ರಾರಂಭಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಹಾಪುರ

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ ತಿಳಿಸಿದ್ದಾರೆ.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯವು ಈ ಹಿಂದೆಯೇ ಪ್ರಾರಂಭವಾಗಬೇಕಾಗಿತ್ತು. ತಜ್ಞ ವೈದ್ಯರು ಇಲ್ಲದ ಪ್ರಯುಕ್ತ ವಿಳಂಬವಾಗಿದೆ. ಇತ್ತೀಚಿಗೆ ಆಸ್ಪತ್ರೆಗೆ ರೇಡಿಯೋಲಾಜಿ ತಜ್ಞ ವೈದ್ಯರು ನೇಮಕವಾಗಿದ್ದಾರೆ. ಈ ಆಸ್ಪತ್ರೆ ಸಾರ್ವಜನಿಕರಿಗೆ ಸೌಲಭ್ಯ ಕೊಡುವಲ್ಲಿ ಮುಂಚೂಣಿಯಲ್ಲಿರುವುದು ಖುಷಿ ತಂದಿದೆ ಎಂದರು.

ಆಡಳಿತ ವೈದ್ಯಾಧಿಕಾರಿ ಡಾ. ಯಲ್ಲಪ್ಪ ಪಾಟೀಲ್ ಮಾತನಾಡಿ, ಈ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಹೊರಗಡೆ ಖಾಸಗಿಯಾಗಿ ಮಾಡಿಸಿದರೆ 500 ರಿಂದ 700 ರು.ಗಳವರೆಗೆ ಖರ್ಚು ಬರುತ್ತದೆ. ಸಾರ್ವಜನಿಕರು ಸಹಕಾರ ಕೊಟ್ಟರೆ ಆಸ್ಪತ್ರೆಯನ್ನು ಜಿಲ್ಲೆಯಲ್ಲೇ ಮಾದರಿಯ ಹಾಸ್ಪಿಟಲ್ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಆರ್ಥಿಕ ಸಂಕಷ್ಟದಿಂದ ಬಳಲುವವರೆ ಹೆಚ್ಚು. ಈ ಆಸ್ಪತ್ರೆಯಲ್ಲಿ ಅಂತಹವರಿಗೆ ಉತ್ತಮ ಸೇವೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಆಸ್ಪತ್ರೆಯಲ್ಲಿ ಈಗಾಗಲೇ ಹಲವಾರು ಬಗೆಯ ಶಸ್ತ್ರ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟರೆ ನನ್ನ ಗಮನಕ್ಕೆ ತರಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ಜಿಲ್ಲಾ ಪ್ರೋಗ್ರಾಮ್ ಆಫೀಸರ್ ಡಾ. ಜ್ಯೋತಿ ಕಟ್ಟಿಮನಿ, ರೇಡಿಯೋಲಾಜಿಸ್ಟ್ ಡಾ. ಮಂಜುನಾಥ ಚಿಕ್ಕಮಠ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಇದ್ದರು.ಸಾರ್ವಜನಿಕರು ಆಸ್ಪತ್ರೆಗೆ ಆಗಮಿಸುವ ಸಮಯದಲ್ಲಿ ಅವಶ್ಯಕ ದಾಖಲೆಗಳಾದ ಆಧಾರ್ ಕಾರ್ಡ್, ಪಡಿತರ ಚೀಟಿ, ಬಿಪಿಎಲ್ ಅಥವಾ ಎಪಿಎಲ್, ಇನ್ನಿತರ ದಾಖಲೆಗಳನ್ನು ನೀಡಿದಲ್ಲಿ, ಎಲ್ಲಾ ರೀತಿಯ ಉಚಿತ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಆಸ್ಪತ್ರೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು.

- ಡಾ. ಯಲ್ಲಪ್ಪ ಪಾಟೀಲ್, ಆಡಳಿತ ವೈದ್ಯಾಧಿಕಾರಿ ಹಾಗೂ ಶಸ್ತ್ರ ಚಿಕಿತ್ಸೆ ತಜ್ಞರು, ಸಾರ್ವಜನಿಕ ಆಸ್ಪತ್ರೆ ಶಹಾಪುರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್