ಜಿಲ್ಲೆಯಾದ್ಯಂತ 33500 ಕಾರ್ಮಿಕರು, ಅವಲಂಬಿತರಿಗೆ ತಪಾಸಣೆ ಗುರಿ
ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದ್ದು ಜಿಲ್ಲೆಯಾದ್ಯಂತ 33500 ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ತಪಾಸಣೆ ಗುರಿಯಿದ್ದು , ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಕೆ.ಗುರುಪ್ರಸಾದ ಅವರು ಮಾತನಾಡಿ ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರು ಇಲಾಖೆಯ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.ಜಿಲ್ಲಾ ಕಾರ್ಮಿಕರ ಅಧಿಕಾರಿಗಳಾದ ಬಿ.ಆರ್. ಜಾಧವ ಅವರು ಮಾತನಾಡಿ ನೊಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರು ಲೇಬರ್ ಕಾರ್ಡಹೊಂದಿರುವ ಅರ್ಹ ಫಲಾನುಭವಿಗಳಿಗೆ ಪ್ರಿವೆಂಟಿವ್ ಹೆಲ್ತ ಕೇರ್ ಟ್ರೈನಿಂಗ್ ಮತ್ತು ತಪಾಸಣೆ ನಡೆಸಲಾಗುವುದು. ಫಲಾನುಭವಿಗಳು ಲೇಬರ್ ಕಾರ್ಡ , ಆಧಾರ ಕಾರ್ಡ ಹಾಗೂ ರೇಶನ್ ಕಾರ್ಡ ಹಾಜರುಪಡಿಸಿ ತಪಾಸಣೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಶಿಬಿರದಲ್ಲಿ ಅರ್ಹ ನೊಂದಾಯಿತ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗ ವಿವಿಧ 20 ರೀತಿಯ ಪರೀಕ್ಷೆ ನಡೆಸಲಾಗುವುದು. ತಪಾಸಣೆ ನಂತರ ಕಾರ್ಮಿಕರಿಗೆ ವೈದ್ಯಕೀಯ ವರದಿಗಳನ್ನು ನೀಡಲಾಗುವುದು ಎಂದರು.