ಆಟೋ ಗ್ಲಾಸ್ ಒಡೆದಿದ್ದಕ್ಕೆಸ್ನೇಹಿತನ ಕೊಂದ ಚಾಲಕ

KannadaprabhaNewsNetwork |  
Published : Feb 03, 2026, 04:15 AM IST
ಕೊಲೆ | Kannada Prabha

ಸಾರಾಂಶ

ಆಟೋ ಗ್ಲಾಸ್ ಒಡೆದು ಹಾಕಿದ ಎಂದು ಕೋಪಗೊಂಡು ತನ್ನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಜಿಬಿಎ ತ್ಯಾಜ್ಯ ವಿಲೇವಾರಿ ವಾಹನ ಚಾಲಕ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಆಟೋ ಗ್ಲಾಸ್ ಒಡೆದು ಹಾಕಿದ ಎಂದು ಕೋಪಗೊಂಡು ತನ್ನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಜಿಬಿಎ ತ್ಯಾಜ್ಯ ವಿಲೇವಾರಿ ವಾಹನ ಚಾಲಕ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಂತರ್ ಪಾಳ್ಯದ ಗುಣ (26) ಕೊಲೆಯಾದ ದುರ್ದೈವಿ. ಈ ಘಟನೆಯಲ್ಲಿ ಗಾಯಗೊಂಡಿರುವ ಮೃತನ ಸ್ನೇಹಿತ ವೇಣು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತ ವಿನೋದ್‌ ಬಂಧನವಾಗಿದೆ. ಮನೆ ಸಮೀಪ ಭಾನುವಾರ ರಾತ್ರಿ ಈ ಮೂವರು ಸ್ನೇಹಿತರು ಸೇರಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಬಿಎನಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಚಾಲಕರಾಗಿದ್ದ ಗುಣ, ವೇಲು ಹಾಗೂ ವಿನೋದ್ ಸ್ನೇಹಿತರಾಗಿದ್ದು, ಪಂತರ್ ಪಾಳ್ಯದಲ್ಲಿ ಅವರು ನೆಲೆಸಿದ್ದರು. ಕಸದ ವಾಹನವಲ್ಲದೆ ಖಾಸಗಿಯಾಗಿ ಸಹ ಅವರು ಆಟೋ ಹೊಂದಿದ್ದರು. ತನ್ನ ಆಟೋದ ಗ್ಲಾಸ್ ಅನ್ನು ಒಡೆದು ಹಾಕಿದ್ದಾರೆ ಎಂದು ಗೆಳೆಯರ ವೇಲು ಹಾಗೂ ಗುಣ ಜತೆ ಭಾನುವಾರ ರಾತ್ರಿ ವಿನೋದ್ ಜಗಳ ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿ, ತನ್ನ ಗೆಳೆಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಗುಣ ಮೃತಪಟ್ಟರೆ, ವೇಲು ತೀವ್ರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಚಿಕಿತ್ಸೆಗೆ ಸ್ಪಂದಿಸಿದ್ದು, ಪ್ರಾಣಪಾಯದಿಂದ ಸುರಕ್ಷಿತವಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿ.ಜೆ.ರಾಯ್‌ ಕೇಸ್‌ : ಸಚಿವೆ ನಿರ್ಮಲಾಗೆ ಕೇರಳ ಸಿಎಂ ಪತ್ರ
ಕರ್ನಾಟಕಕ್ಕೆ ಇನ್ನೊಂದು ‘ಜಲಸಮರ’ದ ಕಂಟಕ!