ಹುಬ್ಬಳ್ಳಿ: ಆದಷ್ಟು ಶೀಘ್ರವೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 2019ರ ಅಧಿಸೂಚನೆಯಂತೆ ಚಾಲಕ- ನಿರ್ವಾಹಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ ಎಂದು ಸಂಸ್ಥೆ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಭರವಸೆ ನೀಡಿದ್ದಾರೆ.
ಈಗಾಗಲೇ ಅಭ್ಯರ್ಥಿಗಳು ತಮಗೆ ಮನವಿ ಸಲ್ಲಿಸಿದ್ದಾರೆ. 1000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. ಇನ್ನೂ 1000 ಅಭ್ಯರ್ಥಿಗಳನ್ನು 2019ರ ಅಧಿಸೂಚನೆಯಂತೆ ನೇಮಕಾತಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಇರುವ ಸಮಸ್ಯೆಗಳನ್ನು ನಿವಾರಿಸಲಾಗುವುದು. ಮಂಗಳವಾರ ನಾನು ಮತ್ತು ಸಂಸ್ಥೆ ಎಂಡಿ ಅವರು ಸಿಎಂ ಹಾಗೂ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ವ್ಯಕ್ತಪಡಿಸಿದರು. ಸಂಸ್ಥೆಗೆ ಇನ್ನೂ ಹೆಚ್ಚಿನ ಸಂಖ್ಯೆಯ ಡ್ರೈವರ್ಗಳ ಅವಶ್ಯಕತೆ ಇದ್ದು, ಈ ಕುರಿತಂತೆಯೂ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಹೋರಾಟಗಾರರ ಮನವಿ: ಈಗಾಗಲೇ ಆದೇಶ ಹೊರಡಿಸಿದಂತೆ 2814 ಹುದ್ದೆಗೆ ನೇಮಕಾತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಸಂಸ್ಥೆಯ ಅಧ್ಯಕ್ಷ ಕಾಗೆ ಅವರಿಗೆ ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ವಾಯವ್ಯ ಸಾರಿಗೆಗೆ ₹2100 ಕೋಟಿ ಬಾಕಿ!ಹುಬ್ಬಳ್ಳಿ:
ಸರ್ಕಾರಿ ನೌಕರರಂತೆ: ಸಾರಿಗೆ ಸಂಸ್ಥೆ ನೌಕರರು ಶ್ರಮಜೀವಿಗಳು. ಅವರಿಗೂ ಸರ್ಕಾರದ ಇತರ ಇಲಾಖೆ ನೌಕರರಂತೆ ವೇತನ ಸಿಗಬೇಕು ಎನ್ನುವುದು ನನ್ನ ನಿಲುವು. ಈ ಕುರಿತಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದೇನೆ. ಸರ್ಕಾರ ಇತರ ಇಲಾಖೆಯ ನಿವೃತ್ತ ನೌಕರರು ಪಡೆಯುವ ಪಿಂಚಣಿಯಷ್ಟೂ ಸಾರಿಗೆ ಇಲಾಖೆ ಸಿಬ್ಬಂದಿ ವೇತನವಿಲ್ಲ. ಈ ತಾರತಮ್ಯ ನಿವಾರಣೆಯಾಗಬೇಕಾದರೆ ಸಾರಿಗೆ ನೌಕರರನ್ನು ವೇತನ ಆಯೋಗದಡಿ ತರುವ ಪ್ರಯತ್ನವನ್ನು ಸರ್ಕಾರ ಮಾಡಬೇಕಿದೆ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ, ಮುಖ್ಯ ಸಂಚಾರಿ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ ಇತರರಿದ್ದರು.