ಹಾವೇರಿ: ಜಿಲ್ಲೆಯ ಹಾನಗಲ್ಲ ಡಿಪೋಗೆ ಸೇರಿದ ಸಾರಿಗೆ ಸಂಸ್ಥೆಯ ಕಂಡಕ್ಟರ್ ಕಂ ಡ್ರೈವರ್ ಮಾರ್ಗದ ಮಧ್ಯದಲ್ಲಿ ವಾಹನ ನಿಲ್ಲಿಸಿ, ಬಸ್ನಲ್ಲಿಯೇ ನಮಾಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರ್ತವ್ಯದ ಅವಧಿಯಲ್ಲಿಯೇ ಡ್ರೈವರ್ ಕಂ ಕಂಡಕ್ಟರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಾರ ಆಕ್ರೋಶ ವ್ಯಕ್ತವಾಗುತ್ತಿದೆ.
ವರದಿ ನೀಡಲು ಸೂಚನೆ: ಬಸ್ ನಿಲ್ಲಿಸಿ, ಬಸ್ ನಲ್ಲಿಯೇ ನಮಾಜ್ ಮಾಡಿರುವ ವಿಡಿಯೋ ಗಮನಕ್ಕೆ ಬಂದಿದೆ. ಕರ್ತವ್ಯದ ಅವಧಿಯ ವೇಳೆ ಬಸ್ ನಲ್ಲಿ ನಮಾಜ್ ಮಾಡಲು ಅವಕಾಶ ಇಲ್ಲ. ಘಟನೆ ನಡೆದ ಸ್ಥಳ ಹಾಗೂ ಯಾಕೆ ಹೀಗೆ ಮಾಡಿದರು ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸಂಸ್ಥೆಯ ಭದ್ರತಾ ವಿಭಾಗಕ್ಕೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಾವೇರಿ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿ ಜಿ. ವಿಜಯಕುಮಾರ ತಿಳಿಸಿದರು.ಕೊರೋನಾ ವೇಳೆ ಲೂಟಿ ತನಿಖೆಯ ವರದಿ ಶೀಘ್ರ ಬಹಿರಂಗ: ಸಲೀಂ ಅಹ್ಮದ್ಹಾವೇರಿ: ಕೊರೋನಾ ಸಂದರ್ಭದಲ್ಲಿ ಆಗಿರುವ ₹2 ಸಾವಿರ ಕೋಟಿ ಲೂಟಿ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲಿ ವರದಿ ಬರಲಿದೆ. ಆಗ ಯಾರು ಜೈಲಿಗೆ ಹೋಗುತ್ತಾರೆ ಎಂಬುದು ಗೊತ್ತಾಗಲಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಹಾಗೆಲ್ಲ ಸಹನೆ ಕಳೆದುಕೊಳ್ಳುವುದಿಲ್ಲ. ಆದರೆ, ಬೆಗಾವಿಯಲ್ಲಿ ನಮ್ಮ ಪಕ್ಷದ ಕಾರ್ಯಕ್ರಮ ಕೆಡಿಸುವ ಉದ್ದೇಶದಿಂದ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದರು. ಪಾಕ್ ಪರ ಯಾರೇ ಘೋಷಣೆ ಕೂಗಿದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.