ಕನ್ನಡಪ್ರಭ ವಾರ್ತೆ ಉಡುಪಿವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ನಗರದ ಹಿರಿಯ ನೇತ್ರತಜ್ಞ ಡಾ. ಕೃಷ್ಣಪ್ರಸಾದ್ ಹೇಳಿದರು.
ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ, ಅಪಘಾತದಲ್ಲಿ ಮರಣ ಹಾಗೂ ತ್ರೀವತರ ಹಾನಿ ಉಂಟಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದು ನಾವು ಕಾಣುತ್ತಿದ್ದೇವೆ. ರಸ್ತೆ ಸುರಕ್ಷತೆ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸುವುದರೊಂದಿಗೆ ರಸ್ತೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ.ರವಿಶಂಕರ್, ಚಾಲಕರು ಸದಾ ರಸ್ತೆಯ ಎಡಬದಿಯಲ್ಲಿ ಚಲಿಸಬೇಕು, ವಿರುದ್ಧ ದಿಕ್ಕಿನಲ್ಲಿ ಚಲಿಸಬಾರದು, ಚಾಲನೆಯಲ್ಲಿ ಮೊಬೈಲ್ ಬಳಸಬಾರದು. ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಅನುಸರಿಸಿ ಸುರಕ್ಷಿತ ಚಾಲನೆ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಮಾತನಾಡಿದ ದಂತವೈದ್ಯ ಡಾ.ವಿಜಯೇಂದ್ರ, ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಜಾಸ್ತಿಯಾಗಿದ್ದು ನಿಯಮಿತವಾಗಿ ವಾಹನಗಳನ್ನು ತಪಾಸಣೆ ಮಾಡಿಸಿ ಸುಸ್ಥಿತಿಯಲ್ಲಿಟ್ಟುಕೊಂಡು, ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸುವಂತೆ ಸಲಹೆ ಮಾಡಿದರು.ಈ ಸಂದರ್ಭ ರಸ್ತೆ ಸುರಕ್ಷತೆ ಕುರಿತು ಕಿರು ಚಿತ್ರವನ್ನು ಪದರ್ಶಿಸಿಲಾಯಿತು. ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕೈಪಿಡಿಯನ್ನು ಮತ್ತು ರಸ್ತೆ ಸುರಕ್ಷತೆ ಕುರಿತು ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.ಪ್ರಸಾದ್ ನೇತ್ರಾಲಯದಿಂದ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.