ಹುಬ್ಬಳ್ಳಿ:
ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಹೊಸದಾಗಿ ಕೆಪಿಎಸ್ ಮ್ಯಾಗನೆಟ್ ಶಾಲೆ ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ, ಕೆಪಿಎಸ್ ಶಾಲೆ ತೆರೆಯುವ ಕುರಿತು ನಿಯಮ ಉಲ್ಲಂಘಿಸಿರುವುದು ಖಂಡನೀಯ. ಇದರಿಂದ ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಶಾಲೆಗಳೆಲ್ಲ ಮುಚ್ಚುತ್ತವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ಗಳೆಂದರೆ 1ರಿಂದ 12ನೇ ತರಗತಿ ವರೆಗೆ ಒಂದೇ ಕಾಂಪೌಂಡ್ನಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಇರಬೇಕು. ಇದರ ಆಡಳಿತದ ಜವಾಬ್ದಾರಿ ಪ್ರಾಚಾರ್ಯರೊಬ್ಬರದೇ ಇರಬೇಕು. ಇದು 2018ರಲ್ಲಿ ಸರ್ಕಾರ ಹೊರಡಿಸಿರುವ ನಿಯಮ.ಆದರೆ, ಇದೀಗ ಕೆಲವೆಡೆ ಕಿರಿಯ ಪ್ರಾಥಮಿಕ ಶಾಲೆಗಳಿದ್ದರೆ, ಹಿರಿಯ ಪ್ರಾಥಮಿಕ ಶಾಲೆ ಮತ್ತೊಂದು ಕಡೆ, ಪ್ರೌಢಶಾಲೆ ಇನ್ನೊಂದು ಕಡೆ ಮತ್ತು ಕಾಲೇಜು ಮಗದೊಂದು ಕಡೆ. ಈ ರೀತಿ ಸಮೀಪದಲ್ಲಿ ಇರುವುಗಳನ್ನೆಲ್ಲ ಸೇರಿಸಿಕೊಂಡು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲಾಗುತ್ತಿದೆ. ಇದು ಸಮಂಜಸವಲ್ಲ. ಇದಕ್ಕೆ ಉದಾಹರಣೆಯೆಂದರೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಂದು ಉನ್ನತೀಕರಿಸಿ 8ನೇ ತರಗತಿ ಪ್ರಾರಂಭಿಸಲಾಗುತ್ತಿದೆ. ಕೆಪಿಎಸ್ ಶಾಲೆಗಳ ಉದ್ದೇಶಕ್ಕೆ ಹಾಗೂ ನಿಯಮಗಳಿಗೆ ಇದು ಸಮಂಜಸವಾಗಿಲ್ಲ ಎಂದು ಹೇಳಿದ್ದಾರೆ.
ಈ ಕೆಪಿಎಸ್ ವ್ಯಾಪ್ತಿಗೆ ಒಳಪಡುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಶಕಗಳಿಂದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಅನುದಾನಿತ ಮತ್ತು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗುತ್ತಿದೆ. ಅನುದಾನಿತ ಶಾಲೆಗಳು ಸಂಪೂರ್ಣವಾಗಿ ಮುಚ್ಚುವ ಭೀತಿ ಎದುರಿಸುವಂತಾಗಿದೆ. ಅಲ್ಲಿನ ಶಿಕ್ಷಕರು ಹಾಗೂ ಸಿಬ್ಬಂದಿಯ ಭವಿಷ್ಯ ಆತಂಕಕ್ಕೆ ಸಿಲುಕಿದೆ ಎಂದು ಸರ್ಕಾರಕ್ಕೆ ಮನವರಿಕೆ ಮಾಡಿದ್ದಾರೆ.