- ಡಿಸಿ ಜತೆ ದೂರವಾಣಿಯಲ್ಲಿ ಆಕ್ರೋಶ । ಜಿಲ್ಲಾ ಕೆಡಿಪಿ ಸಭೆಗೆ ಬರೋದಿಲ್ಲ ಎಂದ ಬಿ.ದೇವೇಂದ್ರಪ್ಪ
ಕನ್ನಡಪ್ರಭ ವಾರ್ತೆ ಜಗಳೂರು
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಜಗಳೂರು ತಾಲೂಕನ್ನು ಸಂಪೂರ್ಣವಾಗಿ ಕೈ ಬಿಟ್ಟಿರುವುದನ್ನು ಖಂಡಿಸಿ, ಜಗಳೂರು ಕ್ಷೇತ್ರದ ಶಾಸಕ ಬಿ.ದೇವೇಂದ್ರಪ್ಪ ಶನಿವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರ ನಡೆಯ ಬಗ್ಗೆ ಜಿಲ್ಲಾಧಿಕಾರಿ ಜೊತೆ ದೂರವಾಣಿಯಲ್ಲಿ ಚರ್ಚಿಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಸಚಿವರ ನಡೆಗಳ ಕುರಿತು ಸಿಎಂ ಗಮನಕ್ಕೆ ತರುವುದಾಗಿ ತಿಳಿಸಿದರು.ತಾಲೂಕಿನ ನೈಜ ಪರಿಸ್ಥಿತಿಯ ಕುರಿತು ಸರಿಯಾದ ವರದಿ ನೀಡದೇ, ಶೋಷಿತ ಹಾಗೂ ಬಡವರ್ಗದ ಜನರಿಗೆ ಅನ್ಯಾಯ ಎಸಗಲಾಗುತ್ತಿದೆ. ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬೆಳೆ ನಷ್ಟ ಉಂಟಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಿದ್ದರೂ ಜಗಳೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಚುನಾವಣೆ ಸಮಯದಲ್ಲಿ ವೋಟ್ ಪಡೆಯಲು ಈ ಕ್ಷೇತ್ರ ಬೇಕು. ಆದರೆ ಜನರ ಸಂಕಷ್ಟಕ್ಕೆ ಸ್ಪಂದಿಸುವಾಗ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ತಾಲೂಕಿನ ನೈಜ ಪರಿಸ್ಥಿತಿ ಹಾಗೂ ಜ್ವಲಂತ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸದ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಬಿ.ದೇವೇಂದ್ರಪ್ಪ, ಇನ್ಮುಂದೆ ಯಾವುದೇ ಜಿಲ್ಲಾ ಕೆಡಿಪಿ ಸಭೆಗೆ ಹಾಜರಾಗುವುದಿಲ್ಲ ಎಂದು ಬಹಿರಂಗವಾಗಿ ಘೋಷಿಸಿದರು.
ನ್ಯಾಯ ಸಿಗುವ ಕಡೆಗೆ ಹೋಗುತ್ತೇವೆ:
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
(ಕೋಟ್) ಜಿಲ್ಲಾಮಟ್ಟದ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಜಗಳೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸೂಕ್ತ ಪ್ರಸ್ತಾವನೆ ಹಾಗೂ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಮುಂದಿನ 3 ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ.
- - -
ಜಗಳೂರು ಕ್ಷೇತ್ರದ ಶಾಸಕ ಬಿ.ದೇವೇಂದ್ರಪ್ಪ ಶನಿವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.