ನರಗುಂದ: ಮಳೆಯ ಕೊರತೆಯಿಂದ ತಾಲೂಕಿನಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಉಳಿದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ತಾಪಂ ಆಡಳಿತಾಧಿಕಾರಿ ಎಚ್.ಬಿ. ಹುಲಗಣ್ಣವರ ಸೂಚಿಸಿದರು.
ಬೆಳೆಗಳಲ್ಲಿ ಕಂಡುಬರುತ್ತಿರುವ ಹಳದಿ ರೋಗ ನಿಯಂತ್ರಣಕ್ಕೆ ಅಗತ್ಯ ಲಸಿಕೆ ಸಿಂಪಡಣೆ ಹಾಗೂ ತಾಂತ್ರಿಕ ಮಾಹಿತಿ ರೈತರಿಗೆ ತಲುಪಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಮಾತನಾಡಿ, ಮಳೆಗಾಲದಲ್ಲಿ ಡೆಂಘೀ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಿಶೇಷ ಅಭಿಯಾನದ ಮೂಲಕ ಪುನಃ ಶಾಲೆಗೆ ದಾಖಲಿಸಬೇಕು. ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟ ಕಾಪಾಡಲು ಅಕ್ಷರ ದಾಸೋಹ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ವಿಬಿ ಜಿ ರಾಮ್ ಜಿ ಯೋಜನೆಯಡಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದ್ದು, ವಿವಿಧ ಇಲಾಖೆಗಳು ಅಗತ್ಯ ಕಟ್ಟಡಗಳ ಪ್ರಸ್ತಾವನೆಗಳನ್ನು ತಾಪಂ ಹಾಗೂ ಸಂಬಂಧಿತ ಗ್ರಾಪಂಗಳಿಗೆ ಸಲ್ಲಿಸಿ, ಕ್ರಿಯಾಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆಯ ಅಧಿಕಾರಿಗಳು, ಇತ್ತೀಚೆಗೆ ಸುರಿದ ಮಳೆಯಿಂದ ನವಿಲುತೀರ್ಥ ಜಲಾಶಯದಲ್ಲಿ ಹೆಚ್ಚುವರಿಯಾಗಿ 4 ಟಿಎಂಸಿ ನೀರು ಸಂಗ್ರಹವಾಗಿದ್ದು, ಸರ್ಕಾರಿ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕವೂ ನೀರು ಪೂರೈಕೆಗೆ ಸಿದ್ಧತೆ ಮಾಡಿಕೊಂಡಿರುವುದರಿಂದ ಸದ್ಯ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದರು.