ಮಾದಕ ವಸ್ತು ಸೇವಿಸಿದರೆ ವಿದ್ಯಾರ್ಥಿ ಜೀವನ ನಾಶ

KannadaprabhaNewsNetwork |  
Published : Jun 19, 2025, 11:49 PM IST
ತಾಳಿಕೋಟೆ 1 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ತಾಳಿಕೋಟೆ ಇಂದಿನ ಆಧುನಿಕ ಭರಾಟೆಯಲ್ಲಿರುವ ಯುವ ಸಮೂಹ ಮಾದಕ ವಸ್ತುಗಳನ್ನು ತಮ್ಮ ಫ್ಯಾಶನ್ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದು, ತಮ್ಮ ಇಡೀ ಜೀವನವನ್ನೇ ಬಲಿ ಕೊಡುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿದ್ದು ತಮ್ಮ ಜೀವನ ಸುಂದರಗೊಳಿಸಿಕೊಳ್ಳಬೇಕು ಎಂದು ಸಿಪಿಐ ಮಹ್ಮದ ಫಶುಉದ್ದೀನ್ ಹೇಳಿದರು.

ಕನ್ನಡಪ್ರಭ ವಾರ್ತೆ ತಾಳಿಕೋಟೆ

ಇಂದಿನ ಆಧುನಿಕ ಭರಾಟೆಯಲ್ಲಿರುವ ಯುವ ಸಮೂಹ ಮಾದಕ ವಸ್ತುಗಳನ್ನು ತಮ್ಮ ಫ್ಯಾಶನ್ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದು, ತಮ್ಮ ಇಡೀ ಜೀವನವನ್ನೇ ಬಲಿ ಕೊಡುತ್ತಿರುವುದು ದುರದೃಷ್ಟಕರ ಸಂಗತಿ. ಇಂತಹ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿದ್ದು ತಮ್ಮ ಜೀವನ ಸುಂದರಗೊಳಿಸಿಕೊಳ್ಳಬೇಕು ಎಂದು ಸಿಪಿಐ ಮಹ್ಮದ ಫಶುಉದ್ದೀನ್ ಹೇಳಿದರು.

ಪಟ್ಟಣದ ಶ್ರೀ ಖಾಸ್ಗತೇಶ್ವರ ಪಪೂ ಮಹಾ ವಿದ್ಯಾಲಯದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಏರ್ಪಡಿಸಲಾಗಿದ್ದ ಮಾದಕ ವಸ್ತು ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಮಾದಕ ವಸ್ತು ಚಟಕ್ಕೆ ಒಮ್ಮೆ ದಾಸರಾದರೆ ಅದರಿಂದ ಹೊರಬರಲು ಬಹಳ ಕಷ್ಟ. ಕೆಲವು ಕಡೆಗಳಲ್ಲಿ ಯುವಕರು ಒಂದು ಚಟ ತ್ಯಜಿಸಲು ಮತ್ತೊಂದು ಚಟಕ್ಕೆ ದಾಸರಾಗುತ್ತಾರೆ. ನಿಷೇಧಿತಗೊಂಡಿರುವ ಯಾವುದೇ ಮಾದಕ ವಸ್ತುಗಳಾದರೂ ಜೀವಕ್ಕೆ ಕಂಠಕವಾಗಿವೆ ಎಂದರು.

ವಿದ್ಯಾರ್ಥಿ ಜೀವನ ಬಹಳ ಸುಂದರ. ನಿಮ್ಮ ಜೀವನ ರೂಪಿಸಿಕೊಳ್ಳಲು ಇದೊಂದು ಸೂಕ್ತ ಸಮಯ. ಈ ವೇಳೆ ಮಾದಕ ವಸ್ತುಗಳ ಚಟಕ್ಕೆ ದಾಸರಾಗದೇ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದ ಅವರು, ಸೈಬರ್ ಕ್ರೈಂ ಎಂಬ ಪೆಡಂಭೂತಕ್ಕೆ ಸಾಕಷ್ಟು ಜನ ವಂಚನೆಗೆ ಒಳಗಾಗುತ್ತಿದ್ದಾರೆ. ಸಂಪರ್ಕಕ್ಕೆ ಸಿಗದ ಕರೆಗಳ ಮೂಲಕ ಓಟಿಪಿ ಪಡೆದು ಹಣ ವಂಚಿಸಿರುವ ಪ್ರಕರಣಗಳು ಕಂಡುಬರುತ್ತಿವೆ ಎಂದು ಹೇಳಿದರು.

ಬಾಲ್ಯ ವಿವಾಹ ಮಾಡುವುದು ಅಪರಾಧ. ಬಾಲ್ಯವಿವಾಹ ನಿಷೇಧ ಕಾಯ್ದೆ ಅತ್ಯಂತ ಕಠಿಣವಾಗಿದೆ. ಇನ್ನೂ ತಿಳಿವಳಿಕೆ ಇಲ್ಲದ ಮಕ್ಕಳಿಗೆ ಮದುವೆ ಮಾಡುವುದರಿಂದ ವಯಸ್ಕರಾದ ಮೇಲೆ ಮನೆಯಲ್ಲಿ ಸಮಸ್ಯೆಗಳ ಸರಮಾಲೆ ಉದ್ಭವವಾಗಿದೆ. ಇಂತಹ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳ ಸಹಾಯ ವಾಣಿ ೧೯೩೦ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿ ಹೇಳಿದರು.

ಎಎಸ್‌ಐ ಸಂಜೀವ ಬಾಗೇವಾಡಿ, ಎಸ್.ಕೆ ಪಿಯು ಕಾಲೇಜು ಅಧ್ಯಕ್ಷ ಎಂ.ಆರ್.ಕತ್ತಿ, ಎಸ್.ಕೆ.ಪ್ರೌಢ ಶಾಲೆಯ ಅಧ್ಯಕ್ಷ ಎಂ.ಸಿ.ಕತ್ತಿ, ಪಿಯು ಕಾಲೇಜು ಪ್ರಾಚಾರ್ಯ ಕೆ.ಕಿಶೋರಕುಮಾರ, ಪ್ರೌಢಶಾಲೆಯ ಉಪ ಪ್ರಾಚಾರ್ಯ ಜಗದೀಶ ಕಟ್ಟಿಮನಿ, ಮಹಿಳಾ ಕಾಲೇಜು ಪ್ರಾಚಾರ್ಯ ಜೆ.ಸಿ.ಹಿರೇಮಠ, ಉಪನ್ಯಾಸಕ ಎಸ್.ಎಸ್.ನೆಲ್ಲಗಿ, ಪೊಲೀಸ್ ಸಿಬ್ಬಂದಿ ಎಂ.ಎಲ್.ಪಟ್ಟೇದ, ಸಿದ್ದನಗೌಡ ದೊಡಮನಿ, ರವಿ ಬಿರಾದಾರ, ಬಸವರಾಜ ಹಡಲಗಿ, ರಾಮನಗೌಡ ಬಿರಾದಾರ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ