ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಸಹಯೋಗದಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳಲ್ಲಿ ಕ್ಷಣಿಕ ಸುಖ ನೀಡುವ ಹಾರ್ಮೋನ್ನನ್ನು ಬಿಡುಗಡೆಗೊಳಿಸುವ ಹಾನಿಕಾರಕ ರಾಸಾಯನಿಕಗಳಿದ್ದು, ಇವುಗಳು ಮನುಷ್ಯನನ್ನು ವ್ಯಸನಕ್ಕೆ ದಾಸನನ್ನಾಗಿ ಮಾಡಿಸುತ್ತವೆ. ಮಾದಕ ವಸ್ತುಗಳ ಸೇವನೆಯಿಂದ ಹಲವಾರು ದೈಹಿಕ ಮತ್ತು ಮಾನಸಿಕ ಕಾಯಿಲೆಗಳು ಹರಡುವುದರಿಂದ ಅವುಗಳಿಂದ ದೂರವಿರಬೇಕೆಂದು ತಿಳಿಸಿದರು.ವಿದ್ಯಾರ್ಥಿಗಳು ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಬಗ್ಗೆ ಅರಿತು, ತಮ್ಮ ಕುಟುಂಬ ಹಾಗೂ ಸಮಾಜಕ್ಕೆ ಸಂದೇಶವನ್ನು ತಲುಪಿಸುವ ಕಾರ್ಯ ಮಾಡಬೇಕು. ವಿದ್ಯಾರ್ಥಿ ದೆಸೆಯಲ್ಲಿ ದುಶ್ಚಟಗಳಿಗೆ ಒಳಗಾಗದೆ, ತಮ್ಮ ವಿದ್ಯಾಭ್ಯಾಸ ಹಾಗೂ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ನೀಡಬೆಕೆಂದು ಎಂದು ತಿಳಿಸಿದರು.
ಜಾಹೀರಾತುಗಳನ್ನು ನೋಡಿ ಪ್ರಭಾವಿತರಾಗಿ, ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ. ಕುತೂಹಲ, ಆಕರ್ಷಣೆಯಿಂದ ಶುರು ಮಾಡಿದ ಕ್ಷಣಿಕ ಕಾಲದ ಕಿಕ್ ಅದು ಹವ್ಯಾಸವಾಗಿ ಬದಲಾವಣೆಯಾಗುತ್ತದೆ. ಇದರಿಂದ ಮಾನಸಿಕ ಹಾಗೂ ದೈಹಿಕ, ಸಾಮಾಜಿಕವಾಗಿ ಬಹಳ ದೊಡ್ಡ ಪರಿಣಾಮ ಬೀರಲಿದೆ. ಹಾಗಾಗಿ ಯುವ ಜನತೆ ತಮ್ಮ ಮನಸ್ಸನ್ನು ಒಳ್ಳೆಯದರ ಕಡೆ ಗಮನಹರಿಸಬೇಕು. ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಬಾಲಕರ ಸರ್ಕಾರಿ ಕಲಾ ಕಾಲೇಜಿನ ಉಪನ್ಯಾಸಕರಾದ ರಾಘು, ಚನ್ನಬಸಪ್ಪ, ಡಾ.ಗುರುನಾಥ್, ಶಶಿಧರ್ ಸೇರಿದಂತೆ ಪಿಯು ವಿದ್ಯಾರ್ಥಿಗಳು ಇದ್ದರು.