ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಶ್ರೀ ರಾಜೀವ್ ಗಾಂಧಿ ಎಜುಕೇಷನ್ ಮತ್ತು ವೆಲ್ಫೇರ್ ಟ್ರಸ್ಟ್- ಸ್ಪಂದನ ವ್ಯಸನ ಮುಕ್ತಿ ಕೇಂದ್ರ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಆಶ್ರಯದಲ್ಲಿ ಪೂರ್ಣ ಪ್ರಜ್ಞಾ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆದ ನಶ ಮುಕ್ತ ಭಾರತ ಅಭಿಯಾನ ಅರಿವು ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇತ್ತೀಚೆಗೆ ಸುಲಭವಾಗಿ ದೊರೆಯುವ ಬೇರೆಬೇರೆ ಮಾದಕ ವಸ್ತುಗಳು ನಮ್ಮ ಯುವಪೀಳಿಗೆ ಮತ್ತು ಸಮಾಜಕ್ಕೆ ಮಾರಕವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಇದೊಂದು ತೊಡಕಾಗಿದೆ. ಹಾಗಾಗಿ ನಮ್ಮ ಯುವಜನತೆಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಕಾರ್ಯಕ್ರಮ ಅತ್ಯಗತ್ಯವಾಗಿರುತ್ತವೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಧಿಕಾರಿ ರತ್ನ ಹೇಳಿದರು.ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ, ಶ್ರೀ ರಾಜೀವ್ ಗಾಂಧಿ ಎಜುಕೇಷನ್ ಮತ್ತು ವೆಲ್ಫೇರ್ ಟ್ರಸ್ಟ್- ಸ್ಪಂದನ ವ್ಯಸನ ಮುಕ್ತಿ ಕೇಂದ್ರ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಆಶ್ರಯದಲ್ಲಿ ಪೂರ್ಣ ಪ್ರಜ್ಞಾ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆದ ನಶ ಮುಕ್ತ ಭಾರತ ಅಭಿಯಾನ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್. ವಹಿಸಿದ್ದರು. ಸ್ಪಂದನ ವ್ಯಸನ ಮುಕ್ತಿ ಕೇಂದ್ರದ ಸಂಯೋಜಕಿ ನಿಶಾ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ನರೇಂದ್ರಕೃಷ್ಣ ಮತ್ತು ಪ್ರೇಮಾನಂದ ಕಲ್ಮಾಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಉಡುಪಿ ನಗರ ಠಾಣಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾರಾಯಣ್ ಬಿ. ಮತ್ತು ಸುಭಾಷ್ ಕಾಮತ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕಾಲೇಜು ಉಪನ್ಯಾಸಕಿ ರಕ್ಷಾ ಸ್ವಾಗತಿಸಿದರು. ಉಪನ್ಯಾಸಕ ಮುರಳಿಧರ್ ನಿರೂಪಿಸಿ, ವಂದಿಸಿದರು. ಸ್ಪಂದನ ಕೇಂದ್ರದ ಉತ್ತಮ್ ಶೆಟ್ಟಿ ಸಹಕರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.