ದೊಡ್ಡಬಳ್ಳಾಪುರ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಇದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದರು.
ಗ್ರಾಮಾಂತರ ಠಾಣೆ ಆರಕ್ಷಕ ನಿರೀಕ್ಷಕ ಡಾ.ನವೀನ್ಕುಮಾರ್ ಮಾತನಾಡಿ, ಡ್ರಗ್ಸ್ ನಿಗ್ರಹದಲ್ಲಿ ಸಮುದಾಯದ ಪಾತ್ರವೂ ಹಿರಿದು. ಪೋಷಕರು ತಮ್ಮ ಮಕ್ಕಳ ನಡವಳಿಕೆಯ ಮೇಲೆ ನಿಗಾ ಇಡುವುದು ಮತ್ತು ಅವರೊಂದಿಗೆ ಉತ್ತಮ ಸಂವಹನ ನಡೆಸುವುದು ಅಗತ್ಯ. ಸಮುದಾಯ ಮಟ್ಟದಲ್ಲಿ ದುಶ್ಚಟಗಳ ವಿರುದ್ಧ ಅಭಿಯಾನಗಳನ್ನು ಹಮ್ಮಿಕೊಳ್ಳುವುದರ ಮೂಲಕ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕು ಎಂದರು.
ಯುವಜನತೆಯಲ್ಲಿ ಈ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾದಕ ವ್ಯಸನಿಗಳನ್ನು ದೂಷಿಸದೆ, ಅವರಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ಮಾನಸಿಕ ಆಪ್ತ ಸಮಾಲೋಚನೆ ನೀಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಪ್ರಮುಖವಾಗಿದೆ. ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಜಾಲವನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ವಿವರಿಸಿದರು.ಸಂಸ್ಥೆಯ ಅಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೆಚ್ಚಿನ ಸಮಯ ಮೀಸಲಿಡಬೇಕು. ಬಾಹ್ಯ ಆಕರ್ಷಣೆಗಳಿಗೆ ಕಡಿವಾಣ ಹಾಕಿ ಶಿಸ್ತುಬದ್ದ ಜೀವನವನ್ನು ನಡೆಸಬೇಕು. ಮಾದಕ ವ್ಯಸನಕ್ಕೆ ಬಲಿಯಾಗಿ ಬದುಕನ್ನು ನಾಶ ಮಾಡಿಕೊಳ್ಳುವ ಅಪಾಯಕಾರಿ ಕೆಲಸಕ್ಕೆ ಕೈಹಾಕಬಾರದು. ಪೊಲೀಸ್ ಇಲಾಖೆಯ ಅಭಿಯಾನ ಅಭಿನಂದನೀಯ ಎಂದು ತಿಳಿಸಿದರು.
23ಕೆಡಿಬಿಪಿ4- ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ನಡೆದ ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನದಲ್ಲಿ ಡಿವೈಎಸ್ಪಿ ಪಾಂಡುರಂಗ ಮಾತನಾಡಿದರು.