ಮಾದಕ ವಸ್ತು ದುರಭ್ಯಾಸದಿಂದ ಹೊರ ಬರುವುದು ಕಷ್ಟ: ಡಿ.ನಟರಾಜು

KannadaprabhaNewsNetwork | Published : Jul 1, 2024 1:55 AM

ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು, ವಿದ್ಯಾರ್ಥಿಗಳು ಒಳಗಾಗುತ್ತಿದ್ದು ಇದನ್ನು ತಡೆಯಲು ಸರ್ವರೂ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಮದ್ಯ, ತಂಬಾಕು, ಡ್ರಗ್ಸ್‌, ಗಾಂಜಾ, ಅಫೀಮು ಮತ್ತಿತರ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುವುದರಿಂದ ಮನುಷ್ಯ ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ನಗರ

ಮಾದಕ ವಸ್ತುಗಳ ಸೇವನೆಯ ದುರಭ್ಯಾಸವನ್ನು ಒಮ್ಮೆ ಬೆಳೆಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟವಾಗಿದ್ದು, ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಡಿ. ನಟರಾಜು ಹೇಳಿದರು.

ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ತಾಲೂಕು ಆರೋಗ್ಯ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು, ವಿದ್ಯಾರ್ಥಿಗಳು ಒಳಗಾಗುತ್ತಿದ್ದು ಇದನ್ನು ತಡೆಯಲು ಸರ್ವರೂ ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು ಎಂದರು.

ಮದ್ಯ, ತಂಬಾಕು, ಡ್ರಗ್ಸ್‌, ಗಾಂಜಾ, ಅಫೀಮು ಮತ್ತಿತರ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುವುದರಿಂದ ಮನುಷ್ಯ ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

1980ರಲ್ಲಿ 28-30 ವರ್ಷದ ಬಳಿ ಮದ್ಯಪಾನ ಮತ್ತು ಧೂಮಪಾನಕ್ಕೆ ಒಳಗಾಗುತ್ತಿದ್ದರು. ಆದರೆ, ಇತ್ತೀಚೆಗೆ 17-18 ವರ್ಷದ ವಯೋಮಾನದವರು ವ್ಯಸನಕ್ಕೆ ತುತ್ತಾಗುತ್ತಿದ್ದು ಇವರು ಸಾಮಾನ್ಯ ವ್ಯಕ್ತಿಗಿಂತ 3 ಪಟ್ಟು ಹೆಚ್ಚು ಕಾಯಿಲೆಗಳಿಗೆ ಒಳಗಾಗಿ ಸಾವಿಗೆ ಹತ್ತಿರವಾಗುತ್ತಾರೆ ಎಂದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ತಜ್ಞ ವೈದ್ಯ ಡಾ. ಕಿಶೋರ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಷಯಾಧಾರಿತ, ಪಿಪಿಟಿ ಮೂಲಕ ಮಾದಕ ವಸ್ತುಗಳ ಅಭ್ಯಾಸ, ದುರಭ್ಯಾಸ, ಚಟ, ವ್ಯಸನ, ಮಾನಸಿಕ ಮತ್ತು ದೈಹಿಕ ಅಡ್ಡಪರಿಣಾಗಳು ಮತ್ತು ಕುಟುಂಬ ಮತ್ತು ಸಮಾಜ ಮೇಲಾಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.

ಕಾಲೇಜು ಪ್ರಾಂಶುಪಾಲಡಾ. ಜಯ, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ. ರೇಖಾ ಮತ್ತು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.ಪಹಣಿಗೆ ಆಧಾರ್‌ ಲಿಂಕ್‌ ಮನೆ ಮನೆಗೆ ಕಂದಾಯ ಅಧಿಕಾರಿಗಳ ಭೇಟಿಕನ್ನಡಪ್ರಭ ವಾರ್ತೆ ಬೆಟ್ಟದಪುರ

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯಾದ್ಯಂತ ರೈತರ ಪಹಣಿ ಜೊತೆಗೆ ಆಧಾರ್ ಜೋಡಿಸುವ ಕಾರ್ಯಕ್ರಮಕ್ಕೆ ಬೆಟ್ಟದಪುರದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ತೆರಳಿ ರೈತರಿಂದ ಆಧಾರ್ ಲಿಂಕ್ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಉಪ ತಹಸೀಲ್ದಾರ್‌ ಶಶಿಧರ್ ಅವರು ರೈತರು ವಿವಿಧ ಯೋಜನೆಗಳಿಂದ ಸರ್ಕಾರದಿಂದ ಬರುವ ಅನುದಾನ ಪಡೆಯಲು ಕೂಡಲೇ ಆಧಾರ್ ಲಿಂಕ್ ಮಾಡಬೇಕು ಹಾಗೂ ಜುಲೈ ತಿಂಗಳ 7ರವರೆಗೆ ಈ ಕಾರ್ಯಕ್ರಮ ನಡೆಯದಿದ್ದು, ರೈತರು ತಮ್ಮ ಹತ್ತಿರದ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಆಧಾರ್ ಸಂಖ್ಯೆಯನ್ನು ಪಹಣಿಗೆ ನೋಂದಾಯಿಸಬೇಕು. ಈ ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತೆ ಶಶಿಧರ್‌ ರೈತರಿಗೆ ಮನವಿ ಮಾಡಿದರು.

ಈ ವೇಳೆ ಗ್ರಾಮ ಲೆಕ್ಕಾಧಿಕಾರಿ ಗುರುನಾಥ್‌ ನಾಯಕ್‌, ಬಿ.ಸಿ. ಸೋಮಶೇಖರ್‌, ಬಿ.ಸಿ. ರಾಜೇಂದ್ರ, ಮಹೇಂದ್ರ, ಮಂಜುನಾಥ್‌ ಮೊದಲಾದವರು ಇದ್ದರು.