ಕನ್ನಡಪ್ರಭ ವಾರ್ತೆ ಸಿಂದಗಿ
ಪಟ್ಟಣದ ಎಚ್.ಜಿ.ಕಾಲೇಜ್ ಸಭಾಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಮ್ಮಿಕೊಂಡಿರುವ ವ್ಯಸನ ಮುಕ್ತ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆಯ ಅಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಕಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳ ಬೆಳೆವಣಿಗೆ ಕುಂಠಿತಗೊಳ್ಳುವುದಲ್ಲದೇ ಕುಟುಂಬದ ಸ್ವಾಸ್ಥ್ಯ ಹಾಳಾಗುತ್ತದೆ. ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುವುದಿಲ್ಲ. ಉತ್ತಮ ಬದುಕಿನಡೆಗೆ ಕನಸು ಕಾಣಬೇಕೆ ಹೊರತು ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ. ವಿದ್ಯಾರ್ಥಿಗಳು, ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ಉಪನ್ಯಾಸಕ ಸಿದ್ಧಲಿಂಗ ಕಿಣಗಿ ನಿರೂಪಿಸಿ, ವಂದಿಸಿದರು.ಈ ವೇಳೆ ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ಆಂದೋಲನದ ಜಾಥಾ ಜರುಗಿತು.