ಗಂಗಾವತಿ:
ಈ ವೇಳೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಪೊಲೀಸ್ ಅಧೀಕ್ಷಕ ಹೇಮಂತಕುಮಾರ ಮಾತನಾಡಿ, ಶೇ. 70ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ. ಅವುಗಳ ದಾಸರಾಗುತ್ತಿರುವ ಯುವಕರು ತಮಗೆ ಅರಿವಿಲ್ಲದೇಯೆ ಕಾನೂನು ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮಾದಕ ವ್ಯಸನವು ವ್ಯಕ್ತಿಯನ್ನು ಮಾನಸಿಕ ಹಾಗೂ ದೈಹಿಕವಾಗಿ ಅಷ್ಟೇ ಅಲ್ಲದೇ ಅವನ ಜೀವನವನ್ನೇ ದುರಂತಕ್ಕೆ ತಳ್ಳುತ್ತದೆ ಎಂದರು.
ಡ್ರಗ್ಸ್, ಗಾಂಜಾ, ತಂಬಾಕು ಪದಾರ್ಥ, ಮದ್ಯಪಾನ ಸೇರಿದಂತೆ ಅನೇಕ ಮಾದಕ ವಸ್ತುಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ ಎಂಬ ಉದಾಹರಣೆಗಳು ಸಾಕಷ್ಟಿವೆ. ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಮೈಗೂಡಿಸಿಕೊಳ್ಳುವ ಮೂಲಕ ಆದರ್ಶಪ್ರಾಯರಾಗಬೇಕು ಎಂದು ಸಲಹೆ ನೀಡಿದರು.ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಮಾತನಾಡಿ, ವ್ಯಸನ ಮುಕ್ತ ಸಮಾಜ ನಿರ್ಮಿಸೋಣ. ಮಾದಕ ವ್ಯಸನಕ್ಕೆ ದಾಸರಾಗುತ್ತಿರುವ ಯುವಜನತೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡಿದ್ದಾರೆ. ಅವುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿತುಕೊಂಡು ಬೇರೆಯವರಿಗೂ ಜಾಗೃತಿ ಮೂಡಿಸಿ ವ್ಯಸನ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಬೇಕೆಂದು ಕರೆ ನಿಡಿದರು.
ಎಲ್. ವೀರಭದ್ರ ರಾವ್, ಮುರಳಿ ಕೃಷ್ಣ, ಡಾ. ಈಶ್ವರ್ ಸವಡಿ ಉಪಸ್ಥಿತರಿದ್ದರು.