
ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವೃತ್ತ ನಿರೀಕ್ಷಕರಾದ ಪಿ.ಕೆ. ರಾಜು ಅವರು ಭಾಗವಹಿಸಿ, ಯುವಕರಲ್ಲಿ ಹೆಚ್ಚುತ್ತಿರುವ ಮದ್ಯ/ಮಾದಕ ವಸ್ತುಗಳ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತುರ್ತು ಸಂದರ್ಭಗಳಲ್ಲಿ ಬಳಸಿಕೊಳ್ಳಬಹುದಾದ ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಹಾಗೂ ಕೆಎಸ್ಪಿ ಆಪ್ ಸಂಬಂಧಿತ ಮಾಹಿತಿಯನ್ನು ನೀಡಿದರು.
ಅದೇ ಸಂದರ್ಭದಲ್ಲಿ “ಸಮ್ಮಿತ್ರಾ ಆಪ್” ಕುರಿತು ಮಾಹಿತಿ ನೀಡಿ, ಮಾದಕ ವಸ್ತುಗಳನ್ನು ದುರುಪಯೋಗಪಡಿಸುವವರ ಬಗ್ಗೆ ವಿವರಗಳನ್ನು ನೀಡುವ ಮೂಲಕ ಸಮಾಜದಲ್ಲಿ ಈ ಸಮಸ್ಯೆಯನ್ನು ನಿರ್ಮೂಲಗೊಳಿಸಲು ವಿದ್ಯಾರ್ಥಿಗಳು ಸಹಕರಿಸಬಹುದು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮೇಜರ್ ಪ್ರೊ. ರಾಘವ ಬಿ. ಅವರು ಮಾತನಾಡಿ, ನಮ್ಮ ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರಿಸಿದರು. ಡ್ರಗ್ ಬಳಕೆದಾರರು ಹಾಗೂ ಸರಬರಾಜು ಮಾಡುವವರ ಕುರಿತು ತಿಳಿದುಬಂದಲ್ಲಿ ಪೊಲೀಸ್ ಅಥವಾ ಪೋಷಕರು ಅಥವಾ ಬೋಧಕ ರಿಗೆ ಮಾಹಿತಿ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಡಾ. ಪ್ರದೀಪ್ ಆರ್. ಭಂಡಾರಿ ಸ್ವಾಗತಿಸಿದರು. ಹಾಗೂ ಧನ್ಯವಾದಗಳನ್ನು ಎನ್ ಎಸ್ ಎಸ್ ಅಧಿಕಾರಿ ಆಲೋಕ್ ಬೆಜೈ ಅವರು ಸಲ್ಲಿಸಿದರು. ಡಾ. ಶೈಲಶ್ರೀ ಕೆ ಮತ್ತಿತರರಿದ್ದರು.