15ರಂದು ಡಿಎಸ್‌ಎಸ್‌ ಜಿಲ್ಲಾ ಘಟಕ ಉದ್ಘಾಟನೆ: ಅಧ್ಯಕ್ಷ ಮೈಲಾರಪ್ಪ

KannadaprabhaNewsNetwork |  
Published : Apr 13, 2025, 02:01 AM IST
11ಕೆಡಿವಿಜಿ2-ದಾವಣಗೆರೆಯಲ್ಲಿ ಶುಕ್ರವಾರ ದಲಿತ ಸಂರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಎನ್‌.ಡಿ.ಮೈಲಾರಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ದಲಿತ ಸಂರಕ್ಷಣಾ ಸಮಿತಿ ನೂತನ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ರ ಜಯಂತಿ ಸಮಾರಂಭ ಏ.15ರಂದು ನಗರದ ಶ್ರೀ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಎನ್‌.ಡಿ.ಮೈಲಾರಪ್ಪ ಹೇಳಿದ್ದಾರೆ.

ದಾವಣಗೆರೆ: ದಲಿತ ಸಂರಕ್ಷಣಾ ಸಮಿತಿ ನೂತನ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ರ ಜಯಂತಿ ಸಮಾರಂಭ ಏ.15ರಂದು ನಗರದ ಶ್ರೀ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಎನ್‌.ಡಿ.ಮೈಲಾರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಸ್. ಬಸವಂತಪ್ಪ ಪುಷ್ಪಾರ್ಚನೆ ಮಾಡುವರು ಎಂದರು.

ಸಮಿತಿ ರಾಜ್ಯಾಧ್ಯಕ್ಷ ಜನ್ಮಭೂಮಿ ನಾಗರಾಜ ಸಂಘವನ್ನು ಉದ್ಘಾಟಿಸುವರು. ಕಾರ್ಮಿಕ ಸಚಿವ ಸಂತೋಷ್ ಲಾಡ್‌, ಮಾಜಿ ಸಚಿವ ಎಚ್.ಆಂಜನೇಯ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಬಸವರಾಜ ವಿ. ಶಿವಗಂಗಾ, ಲತಾ ಮಲ್ಲಿಕಾರ್ಜುನ, ಬಿ.ದೇವೇಂದ್ರಪ್ಪ, ಡಿ.ಜಿ. ಶಾಂತನಗೌಡ, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಇತರರು ಭಾಗವಹಿಸುವರು ಎಂದು ಹೇಳಿದರು.

ಸರ್ಕಾರದಿಂದ ಸಿಗುವ ಸೌಲಭ್ಯ, ಶೋಷಿತ, ನೊಂದವರಿಗೆ ನ್ಯಾಯ ಒದಗಿಸಬೇಕೆಂಬ ಸದುದ್ದೇಶದಿಂದ ನೂತನ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಅಂಬೇಡ್ಕರ್ ತತ್ವದಲ್ಲಿ ಸಾಮಾಜಿಕ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಸಮಿತಿ ಗೌರವಾಧ್ಯಕ್ಷ ಬಿ.ಎಲ್. ಚಂದ್ರಣ್ಣ, ಬಿ.ಎಲ್‌. ಪರಶುರಾಮ, ಚನ್ನಮ್ಮ ಆವರಗೆರೆ, ರೇಣುಕಮ್ಮ, ರುದ್ರಮ್ಮ, ಆಶಾ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''