ಸರಕಾರದ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಯಿಂದ ಸದಸ್ಯತ್ವ ರದ್ದು ಆದೇಶ: ರವೀಂದ್ರ ಮುದಿಯಪ್ಪನವರ

KannadaprabhaNewsNetwork |  
Published : Dec 04, 2025, 02:30 AM IST
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ಅಸಮಧಾನ, ಕಾನೂನು ಹೋರಾಟಕ್ಕೆ ಮುಂದಾದ ಪ.ಪಂ ಅನರ್ಹ ಅಧ್ಯಕ್ಷ ಉಪಾಧ್ಯಕ್ಷ  | Kannada Prabha

ಸಾರಾಂಶ

ಕಾನೂನಿನ ನಿಯಮಗಳನ್ನು ಪಾಲಿಸದೇ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿ ಏಕ ಪಕ್ಷೀಯವಾಗಿ ಆದೇಶ ನೀಡಿದ್ದಾರೆ ಎಂದು ರವೀಂದ್ರ ಮುದಿಯಪ್ಪನವರ ಆರೋಪಿಸಿದ್ದಾರೆ.

ರಟ್ಟೀಹಳ್ಳಿ: ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸದಸ್ಯತ್ವ ರದ್ದು ಪಡಿಸಿ ಆದೇಶ ನೀಡಿರುವ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸರಕಾರದ ಒತ್ತಡಕ್ಕೆ ಮಣಿದು ಪ್ರತಿವಾದವನ್ನು ಆಲಿಸದೇ ಏಕ ಪಕ್ಷೀಯವಾಗಿ ಆದೇಶ ನೀಡಿರುವುದು ಅತ್ಯಂತ ನೋವಿನ ಸಂಗತಿ. ಜಿಲ್ಲಾಡಳಿದ ಈ ನಡೆಯ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಎಂದು ಪಟ್ಟಣ ಪಂಚಾಯಿತಿ ಅನರ್ಹ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ ಹಾಗೂ ಉಪಾಧ್ಯಕ್ಷ ಶಿವಕುಮಾರ ಉಪ್ಪಾರ ಆಕ್ರೋಶ ವ್ಯಕ್ತಪಡಿಸಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಸೆ. 30ರಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನಗೆ ಹಾಗೂ ಶಿವಕುಮಾರ ಉಪ್ಪಾರ ಅವರಿಗೆ ಅತೀ ಹೆಚ್ಚು ಸದಸ್ಯರು ಬೆಂಬಲ ಸೂಚಿಸಿದ್ದರಿಂದ ಅಧ್ಯಕ್ಷ ಸ್ಥಾನ ಲಭಿಸಿತು. ಚುನಾವಣೆ ಸಂದರ್ಭದಲ್ಲಿ ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಂಗ್ರೆಸ್ ಚಿನ್ಹೆಯಲ್ಲಿ ಗೆಲವು ಸಾಧಿಸಿ ಪಕ್ಷದಲ್ಲೇ ಇಂದು ನನ್ನ ಮತವನ್ನು ನಾನೇ ಹಾಕಿಕೊಂಡಿದ್ದು, ನಾನು ಯಾರಿಗೂ ಮತ ಚಲಾಯಿಸಿಲ್ಲ. ನನಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ ನೀಡಿ ಗೆಲ್ಲಿಸಿದ್ದಾರೆ. ಆದ್ದರಿಂದ ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾನೂನಿನ ಪ್ರಕಾರ ಚುನಾವಣೆಯ 5 ದಿನಗಳ ಮುಂಚಿತವಾಗಿ ಸಭೆ ನಡೆಸಿ ವಿಪ್ ಜಾರಿ ಮಾಡಿ ಆ ಪತ್ರಕ್ಕೆ ಎಲ್ಲ ಸದಸ್ಯರ ಸಹಿ ಹಾಕಿಸಬೇಕು. ಆದರೆ, ವಿಪ್ ಜಾರಿ ಪತ್ರಕ್ಕೆ ನನ್ನ ಸಹಿ ಇಲ್ಲದೇ ತರಾತುರಿಯಲ್ಲಿ ಒಂದೆರಡು ದಿನಗಳಲ್ಲಿ ಸುಳ್ಳು ದಾಖಲಾತಿ ಸೃಷ್ಟಿಸಿ ಕಾನೂನಿನ ನಿಯಮಗಳನ್ನು ಪಾಲಿಸದೇ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿ ಏಕ ಪಕ್ಷೀಯವಾಗಿ ಆದೇಶ ನೀಡಿದ್ದಾರೆ ಎಂದು ಆರೋಪಿಸಿದರು.

ಶಿವಕುಮಾರ ಉಪ್ಪಾರ ಮಾತನಾಡಿ, ಜಿಲ್ಲಾಧಿಕಾರಿಗಳು ನನ್ನ ಸದಸ್ಯತ್ವವನ್ನು ರದ್ದು ಮಾಡಿದ್ದಾರೆ. ಕಾನೂನಿನ ನಿಯಮಗಳನ್ನು ಗಾಳಿಗೆ ತೂರಿ ನಮ್ಮ ವಾದ ಆಲಿಸದೇ ಜಿಲ್ಲಾಧಿಕಾರಿಗೆ ಸಂಬಂಧಪಟ್ಟ ದಾಖಲಾತಿಗಳನ್ನು ಕೇಳಿದರೂ ನೀಡದೇ ಸರಕಾರ ಹಾಗೂ ರಾಜಕೀಯ ಮುಖಂಡರ ಒತ್ತಡಕ್ಕೆ ಮಣಿದು ಆದೇಶ ನೀಡಿರುವುದನ್ನು ಖಂಡಿಸುತ್ತೇನೆ. ಸಲಹೆ ಪಡೆದು ಕಾನೂನಿನ ಮೂಲಕವೇ ಹೋರಾಡಿ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಪಕ್ಷೇತರನಾಗಿ ಆಯ್ಕೆಯಾಗಿದ್ದು, ನಾನು ಯಾವುದೇ ರೀತಿ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವ ಪಡೆದಿಲ್ಲ. ಪಪಂ ಅಧಿಕಾರಕ್ಕೆ ಯಾವುದೇ ಪಕ್ಷಕ್ಕೂ ಬಹುಮತವಿಲ್ಲದ ಕಾರಣ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಮೀಟಿಂಗ್‍ಗಳಲ್ಲಿ ಭಾಗಿಯಾಗಿದ್ದು ನಿಜ. ಆದರೆ, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಹಿ ಹಾಕಿಲ್ಲ. ಆದರೂ, ಅಧಿಕಾರ ಸಿಗದ ಹತಾಶೆಯಲ್ಲಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ನನ್ನ ಸಹಿ ಕೊಟ್ಟಿ ಮಾಡಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದರೆ ದೂರು ದಾಖಲಿಸಿಕೊಂಡಿಲ್ಲ. ಆದ್ದರಿಂದ ಹಿರೇಕೆರೂರ ಕೋರ್ಟಿನಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ವಿರುದ್ಧ ಪ್ರಕರಣ ದಾಖಲಿಸಿದ್ದೇನೆ. ಆದ್ದರಿಂದ ನನಗೆ ಕಾನೂನಿನ ಮೂಲಕ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಪಪಂ ಸದಸ್ಯ ಬಸವರಾಜ ಆಡಿನವರ, ಬಸವರಾಜ ಕಟ್ಟಿಮನಿ, ರವಿ ಹದಡೇರ, ಮುಖಂಡರಾದ ನಾಗರಾಜ ದ್ಯಾವಕ್ಕಳವರ, ರೋಹಿತ್ ಮುದಿಯಪ್ಪನವರ ಹಾಗೂ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳ್ತಂಗಡಿ ಬಸ್ ನಿಲ್ದಾಣ ಕಾಮಗಾರಿಗೆ ಮರುಜೀವ
ಪ್ರತಿಭಾ ಕಾರಂಜಿ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಸೋಮಯ್ಯ