ಭಾರೀ ಮಳೆಗೆ ದೇಗುಲ, ಶಾಲಾ ಆವರಣ ಸಂಪೂರ್ಣ ಜಲಾವೃತ..!

KannadaprabhaNewsNetwork |  
Published : Sep 30, 2024, 01:28 AM IST
29ಕೆಎಂಎನ್ ಡಿ14 | Kannada Prabha

ಸಾರಾಂಶ

ಕಳೆದ ಹಲವು ದಿನಗಳಿಂದ ಮಳೆ ಇಲ್ಲದೇ ಸಂಕಷ್ಟದಲ್ಲಿದ್ದ ರೈತರಿಗೆ ಶನಿವಾರ ಸುರಿದ ಮಳೆ ಹರ್ಷ ತಂದಿದೆ. ಮತ್ತೊಂದೆಡೆ ಭಾರಿಯಿಂದ ಕಂದೇಗಾಲ-ಕಲ್ಲುವೀರನಹಳ್ಳಿ ಗ್ರಾಮಗಳ ಪ್ರಸಿದ್ಧ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತ್ತವಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಂದೇಗಾಲ- ಕಲ್ಲುವೀರನಹಳ್ಳಿಯ ಗ್ರಾಮಗಳ ಇತಿಹಾಸ ಪ್ರಸಿದ್ಧ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ ಆವರಣ ಹಾಗೂ ಶಾಲಾ ಆವರಣ ಸಂಪೂರ್ಣ ಜಲಾವೃತವಾಗಿದೆ.

ಪಟ್ಟಣದ ಸೇರಿದಂತೆ ತಾಲೂಕಿನ ಹಲವೆಡೆ ಶನಿವಾರ ರಾತ್ರಿ 11 ಗಂಟೆಗೆ ಆರಂಭವಾದ ಭಾನುವಾರ ಬೆಳಗಿನ ಜಾವದವರೆಗೂ ನಿರಂತರವಾಗಿ ಸುರಿದಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಕಂದೇಗಾಲದ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ, ಶಾಲೆ ಹಾಗೂ ಜಮೀನುಗಳು ಜಲಾವೃತವಾಗಿವೆ.

ಕಳೆದ ಹಲವು ದಿನಗಳಿಂದ ಮಳೆ ಇಲ್ಲದೇ ಸಂಕಷ್ಟದಲ್ಲಿದ್ದ ರೈತರಿಗೆ ಶನಿವಾರ ಸುರಿದ ಮಳೆ ಹರ್ಷ ತಂದಿದೆ. ಮತ್ತೊಂದೆಡೆ ಭಾರಿಯಿಂದ ಕಂದೇಗಾಲ-ಕಲ್ಲುವೀರನಹಳ್ಳಿ ಗ್ರಾಮಗಳ ಪ್ರಸಿದ್ಧ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತ್ತವಾಗಿದೆ.

ಭಾನುವಾರ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಸಾಕಷ್ಟು ಅನಾನುಕೂಲವಾಯಿತು. ಮೊಳೆದೊಡ್ಡಿ, ಕಲ್ಲುವೀರನಹಳ್ಳಿ, ಕಂದೇಗಾಲ ಸೇರಿದಂತೆ ಹಲವೆಡೆ ಮಳೆಯಿಂದಾಗಿ ರೈತರ ಜಮೀನುಗಳು ಜಲಾವೃತ್ತವಾಗಿವೆ. ಸರ್ಕಾರಿ ಪ್ರೌಢಶಾಲೆಯ ಆವರಣ ಸಹ ಜಲಾವೃತ್ತವಾಗಿ ಸುಮಾರು 2 ಅಡಿಯಷ್ಟು ನೀರು ನಿಂತಿದೆ. ಹಲವು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ದೇವಸ್ಥಾನದ, ಶಾಲೆಯ ಸಂಪರ್ಕದ ರಸ್ತೆಗಳಲ್ಲೂ ನೀರು ನಿಂತಿದೆ.

ಮಂಡ್ಯದಲ್ಲಿ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ

ಮಂಡ್ಯ:ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಮತ್ತು ಭಾನುವಾರ ಸಂಜೆ ಭಾರೀ ಮಳೆ ಸುರಿಯಿತು.

ಕಳೆದ ಕೆಲ ದಿನಗಳಿಂದ ಬಿಸಿಲು ಮತ್ತು ಮೋಡದ ವಾತಾವರಣವಿತ್ತು. ಬಹಳ ದಿನಗಳ ನಂತರ ಶನಿವಾರ ರಾತ್ರಿ ಗುಡುಗು, ಸಿಡಿಲಿನ ನಡುವೆ ಭಾರಿ ಮಳೆ ಸುರಿದು ಕೆಲಕಾಲ ವಾತಾವರಣವನ್ನು ತಂಪಾಗಿಸಿತು.ಅದೇ ರೀತಿ ಭಾನುವಾರ ಬೆಳಗ್ಗೆಯಿಂದ ಭಾರಿ ಬಿಸಿಲಿತ್ತು. ಸಂಜೆ ಮೋಡ ಕವಿದು ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಭಾರಿ ಮಳೆ ಸುರಿಯಿತು. ಮಳೆಯಿಂದಾಗಿ ಹಳ್ಳ ಕೊಳ್ಳಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನಗರದ ಕಲಾಮಂದಿರ ಹಾಗೂ ವಿವಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು.

ಮಂಡ್ಯ ಮಾತ್ರವಲ್ಲದ ಜಿಲ್ಲೆಯ ವಿವಿಧ ತಾಲೂಕುಗಳ ಹಲವೆಡೆ ಭಾರಿ ಮಳೆ ಸುರಿದ ವರದಿಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ