ಯಶವಂತಪುರ ನಿಲ್ದಾಣದಿಂದ 6 ರೈಲು ಸಂಚಾರ ರದ್ದು : ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್

KannadaprabhaNewsNetwork |  
Published : Aug 22, 2024, 12:51 AM ISTUpdated : Aug 22, 2024, 08:54 AM IST
ಯಶವಂತಪುರ | Kannada Prabha

ಸಾರಾಂಶ

ಯಶವಂತಪುರ ರೈಲು ನಿಲ್ದಾಣ ಪುನರ್‌ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪ್ಲಾಟ್​ಫಾರಂಗಳಲ್ಲಿ ಏರ್​-ಕಾನ್ಕೋರ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್​ ಮಾಡಲಾಗುತ್ತಿರುವುದರಿಂದ ಆರು ರೈಲುಗಳ ಸಂಚಾರ ರದ್ದಾಗಿದ್ದು, ಎಂಟು ರೈಲುಗಳು ಭಾಗಶಃ ರದ್ದಾಗಿದೆ.

 ಬೆಂಗಳೂರು : ಯಶವಂತಪುರ ರೈಲು ನಿಲ್ದಾಣ ಪುನರ್‌ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪ್ಲಾಟ್​ಫಾರಂಗಳಲ್ಲಿ ಏರ್​-ಕಾನ್ಕೋರ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್​ ಮಾಡಲಾಗುತ್ತಿರುವುದರಿಂದ ಆರು ರೈಲುಗಳ ಸಂಚಾರ ರದ್ದಾಗಿದ್ದು, ಎಂಟು ರೈಲುಗಳು ಭಾಗಶಃ ರದ್ದಾಗಿದೆ.

ಬುಧವಾರದಿಂದ (ಆ.21) ಸೆಪ್ಟೆಂಬರ್​​ 4ರ ವರೆಗೆ 2 ಮತ್ತು 3ನೇ ಪ್ಲಾಟ್​ಫಾರಂ ಬಂದ್​ ಆಗಲಿದೆ. ಬಳಿಕ ಸೆ. 5ರಿಂದ 19ರ ವರೆಗೆ 4 ಮತ್ತು 5ನೇ ಪ್ಲಾಟ್​ಫಾರಂ ಬಂದಾಗುತ್ತಿದೆ. ಈ ಕಾರಣದಿಂದ ತುಮಕೂರು-ಕೆಎಸ್ಆರ್ ಬೆಂಗಳೂರು (06576) ಮತ್ತು ಕೆಎಸ್ಆರ್ ಬೆಂಗಳೂರು-ತುಮಕೂರು ರೈಲು (06575) ಆಗಸ್ಟ್​​ 21 ರಿಂದ 31 ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ರದ್ದಾಗಿದೆ.

ಭಾಗಶಃ ರದ್ದು:

06574, 06580 ತುಮಕೂರು-ಯಶವಂತಪುರ ರೈಲು ಆ. 31ರವರೆಗೆ ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಚಿಕ್ಕಬಾಣಾವರ-ಯಶವಂತಪುರ ನಡುವೆ ಭಾಗಶಃ ರದ್ದಾಗಲಿದೆ. ರೈಲು ಸಂಖ್ಯೆ 06591, 06592 ಯಶವಂತಪುರ-ಹೊಸೂರು ಮಧ್ಯೆ ಸಂಚರಿಸುವ ರೈಲು ಆಗಸ್ಟ್‌ 31ರವರೆಗೆ ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಯಶವಂತಪುರ-ಹೆಬ್ಬಾಳ ನಡುವೆ ಭಾಗಶಃ ರದ್ದಾಗಲಿದೆ.

ಯಶವಂತಪುರ-ಚಿಕ್ಕಬಳ್ಳಾಪುರ ರೈಲು (06593, 06594) ಸಂಚಾರ ಆಗಸ್ಟ್​​ 21 ರಿಂದ 31 ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಯಶವಂತಪುರ-ಯಲಹಂಕ ನಡುವೆ ಭಾಗಶಃ ರದ್ದಾಗಲಿದೆ. ಯಶವಂತಪುರ-ಹೊಸೂರು (06393, 06393) ರೈಲು ಆಗಸ್ಟ್‌ 31ರವರೆಗೆ ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಯಶವಂತಪುರ-ಹೆಬ್ಬಾಳ ನಡುವೆ ಭಾಗಶಃ ಸಂಚರಿಸುವುದಿಲ್ಲ. ಯಶವಂತಪುರ-ತುಮಕೂರು (06573) ರೈಲು ಆಗಸ್ಟ್​​ 21 ರಿಂದ 31 ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಯಶವಂತಪುರ-ಚಿಕ್ಕಬಾಣಾವರ ನಡುವೆ ಭಾಗಶಃ ರದ್ದಾಗಲಿದೆ.

ಚಿಕ್ಕಮಗಳೂರು-ಯಶವಂತಪುರ (16239, 16240) ರೈಲು ಆಗಸ್ಟ್​​ 21 ರಿಂದ 31 ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಚಿಕ್ಕಬಾಣಾವರ-ಯಶವಂತಪುರ ನಡುವೆ ಭಾಗಶಃ ಸಂಚರಿಸುವುದಿಲ್ಲ. ಮೈಸೂರು-ಯಶವಂತಪುರ (16207, 16208) ಆಗಸ್ಟ್​​ 21 ರಿಂದ 31 ಮತ್ತು ಸೆಪ್ಟೆಂಬರ್​​ 1 ರಿಂದ 19ರವರೆಗೆ ಚಿಕ್ಕಬಾಣಾವರ-ಯಶವಂತಪುರ ನಡುವೆ ಭಾಗಶಃ ರದ್ದಾಗಲಿದೆ. ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ