ಕನ್ನಡಪ್ರಭ ವಾರ್ತೆ ಮಂಡ್ಯ
ಕಾವೇರಿ ಆರತಿ ಬೇಕು ಎಂದು ಕೇಳಿದ್ದವರು ಯಾರು? ಅದರಿಂದ ರೈತರಿಗೆ ಏನು ಉಪಯೋಗ? ರೈತರಿಗೆ ನಿಜವಾಗಲೂ ಬೇಕಾಗಿರುವುದು ನೀರು. ಮದ್ದೂರು ಮತ್ತು ಮಳವಳ್ಳಿ ಕೊನೆ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಕೊನೆಯ ಭಾಗಕ್ಕೆ ನೀರು ತಲುಪಿಸುವುದಕ್ಕೆ ಯೋಜನೆಯನ್ನು ರೂಪಿಸದೆ ಅನಗತ್ಯ ಯೋಜನೆಗಳಿಗೆ ಸಾರ್ವಜನಿಕ ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸರಿಯೇ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಹೆಸರಿನಲ್ಲಿ ರಾಜ್ಯ ಸರ್ಕಾರ ವ್ಯಾಪಾರೀಕರಣಕ್ಕೆ ಮುಂದಾಗಿದೆ. ಈಗಾಗಲೇ ಬೃಂದಾವನಕ್ಕೆ ಹೋಗುವ ಪ್ರವಾಸಿಗರ ಪಾರ್ಕಿಂಗ್ಗೆ ೩೦೦ ರಿಂದ ೪೦೦ ರು. ಮಾಡಿದ್ದಾರೆ. ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣವಾದಲ್ಲಿ ಇನ್ನೂ ಹೆಚ್ಚು ದರ ನಿಗದಿ ಮಾಡುತ್ತಾರೆ. ಆಳುವವರು ಕೆಆರ್ಎಸ್ನ್ನು ಕೇವಲ ವ್ಯಾಪಾರೀಕರಣ ದೃಷ್ಟಿಯಿಂದ ನೋಡುತ್ತಿದ್ದಾರೆಯೇ ವಿನಃ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಕಾಣುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.ಆಳುವ ಸರ್ಕಾರಗಳು ರೈತರಿಗೆ ಮತ್ತು ರಾಜ್ಯದ ಜನರ ಒಳಿತಿಗಾಗಿ ಯೋಜನೆಗಳನ್ನು ರೂಪಿಸಬೇಕು. ಅದು ಬಿಟ್ಟು ಅಣೆಕಟ್ಟೆಗೆ ಮಾರಕವಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳಿಂದ ಅಣೆಕಟ್ಟೆಗೆ ಧಕ್ಕೆಯಾದರೆ ಯಾರು ಹೊಣೆ, ಇವರು ೫ ವರ್ಷಗಳ ಕಾಲ ಅಧಿಕಾರದಲ್ಲಿರುತ್ತಾರೆ. ನಂತರ ಹೋಗುತ್ತಾರೆ. ಇದರ ಜವಾಬ್ದಾರಿ ತೆಗೆದುಕೊಳ್ಳುವವರು ಯಾರು ಎಂದು ಪ್ರಶ್ನಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೈತರ ಕೃಷಿ ಚಟುವಟಿಕೆಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಕೆಆರ್ಎಸ್ ನಿರ್ಮಾಣ ಮಾಡಿದರು. ಆಳುವ ಸರ್ಕಾರಗಳು ಬಂದ ನಂತರ ಅದನ್ನು ಕುಡಿಯುವ ನೀರಿಗಾಗಿಯೂ ಬಳಸಿಕೊಳ್ಳಲು ಪ್ರಾರಂಭಿಸಿವೆ. ಬೆಂಗಳೂರಿಗೆ ಅತಿ ಹೆಚ್ಚು ನೀರನ್ನು ಕೊಂಡೊಯ್ಯುತ್ತಿದ್ದಾರೆ. ಇದರೊಂದಿಗೆ ಅಮ್ಯೂಸ್ಮೆಂಟ್ ಪಾರ್ಕ್ ಎಂಬ ಹೆಸರಿನಲ್ಲಿ ವ್ಯಾಪಾರೀಕರಣ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿಗೆ ಆರತಿ ಎಂಬ ಸ್ಲೋಗನ್ ಬಳಸಿ ಅಲ್ಲಿನ ಪರಿಸರ ಮತ್ತು ನೈರ್ಮಲ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾರೆ. ಹಣ ಮಾಡುವುದೇ ಯೋಜನೆಯ ಮೂಲ ಉದ್ದೇಶವಾಗಿದೆ. ಇಂತಹ ಯೋಜನೆಗಳಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಅನುಕೂಲವಾಗುವುದಿಲ್ಲ. ಕಾವೇರಿ ಆರತಿ ಹಿಂದೆ ಸರ್ಕಾರ ಲಾಭದ ಉದ್ದೇಶವಿದೆಯೇ ವಿನಃ ಬೇರೆನೂ ಅಲ್ಲ ಎಂದು ಹೇಳಿದರು.
ನಾಗರ ಹಾವು ಹರಿದಾಡಿದ್ದಕ್ಕೆ ೧೩ ಮರ ಕಡಿದರು:
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಮಂಜೇಗೌಡ, ಮುಖಂಡರಾದ ಮಹೇಂದ್ರ, ಮಲ್ಲೇಶ್, ಲಿಂಗರಾಜು ಗೋಷ್ಠಿಯಲ್ಲಿದ್ದರು.