ದುರ್ಗಾದೇವಿ ಶರನ್ನವರಾತ್ರಿ ಉತ್ಸವ

KannadaprabhaNewsNetwork |  
Published : Oct 04, 2024, 01:10 AM IST
 ಹೊಸದುರ್ಗದಲ್ಲಿ ಪ್ರತಿಷ್ಠಾಪಿಸಲಾದ ದುರ್ಗಾದೇವಿ ಮೂರ್ತಿ | Kannada Prabha

ಸಾರಾಂಶ

ದುರ್ಗಾ ಸೇವಾ ಸಮಿತಿ ವತಿಯಿಂದ ಪಟ್ಟಣದ ಅಶೋಕ ರಂಗಮಂದಿರದ ದುರ್ಗಾದೇವಿ ಮಂಟಪದಲ್ಲಿ 7 ನೇ ವರ್ಷದ ಶರನ್ನವರಾತ್ರಿ ಆಚರಣೆ ಅಂಗವಾಗಿ ಸಿಂಹಾರೂಢ ದುರ್ಗಾದೇವಿಯ ಮೂರ್ತಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಪ್ರಾರಂಭದಲ್ಲಿ ಪಟ್ಟಣದ ನಗರ ದೇವತೆ ದುರ್ಗಾಂಭಿಕ ದೇವಿಯ ಪೂಜಿಸಿ ಬಂದ ಅರ್ಚಕರಾದ ದೇವಿಪ್ರಸಾದ್‌, ಗಣೇಶ ಭಟ್ಟರು, ಶ್ರೀನಿವಾಸ್‌ ನೇತೃತ್ವದಲ್ಲಿ ವಿವಿಧ ಹೋಮ ಹವನಗಳನ್ನು ನಡೆದವು. ನಂತರ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ, ಪೂಜೆಗೆ ಅವಕಾಶ ಕಲ್ಪಿಸಲಾಯಿತು. ಭಕ್ತರು ಕಕ್ಕೇರಾದ ಶಿಲ್ಪಿ ಜೆಡಿ. ಭಟ್‌ರಿಂದ ತಯಾರಾದ ಸುಂದರ ಮೂರ್ತಿಯ ದರ್ಶನ ಪಡೆಯುವ ಮೂಲಕ ಪುನೀತರಾದರು. ಈ ವೇಳೆ ದುರ್ಗಾ ದೇವಿ ಸಮಿತಿಯ ಅಧ್ಯಕ್ಷ ಮಂಜುನಾಥ್‌ ಸೇರಿದಂತೆ ಪದಾಧಿಕಾರಿಗಳು ಹಾಗು ಭಕ್ತರು ಹಾಜರಿದ್ದರು.

ಹೊಸದುರ್ಗ: ದುರ್ಗಾ ಸೇವಾ ಸಮಿತಿ ವತಿಯಿಂದ ಪಟ್ಟಣದ ಅಶೋಕ ರಂಗಮಂದಿರದ ದುರ್ಗಾದೇವಿ ಮಂಟಪದಲ್ಲಿ 7 ನೇ ವರ್ಷದ ಶರನ್ನವರಾತ್ರಿ ಆಚರಣೆ ಅಂಗವಾಗಿ ಸಿಂಹಾರೂಢ ದುರ್ಗಾದೇವಿಯ ಮೂರ್ತಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಪ್ರಾರಂಭದಲ್ಲಿ ಪಟ್ಟಣದ ನಗರ ದೇವತೆ ದುರ್ಗಾಂಭಿಕ ದೇವಿಯ ಪೂಜಿಸಿ ಬಂದ ಅರ್ಚಕರಾದ ದೇವಿಪ್ರಸಾದ್‌, ಗಣೇಶ ಭಟ್ಟರು, ಶ್ರೀನಿವಾಸ್‌ ನೇತೃತ್ವದಲ್ಲಿ ವಿವಿಧ ಹೋಮ ಹವನಗಳನ್ನು ನಡೆದವು. ನಂತರ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ, ಪೂಜೆಗೆ ಅವಕಾಶ ಕಲ್ಪಿಸಲಾಯಿತು. ಭಕ್ತರು ಕಕ್ಕೇರಾದ ಶಿಲ್ಪಿ ಜೆಡಿ. ಭಟ್‌ರಿಂದ ತಯಾರಾದ ಸುಂದರ ಮೂರ್ತಿಯ ದರ್ಶನ ಪಡೆಯುವ ಮೂಲಕ ಪುನೀತರಾದರು. ಈ ವೇಳೆ ದುರ್ಗಾ ದೇವಿ ಸಮಿತಿಯ ಅಧ್ಯಕ್ಷ ಮಂಜುನಾಥ್‌ ಸೇರಿದಂತೆ ಪದಾಧಿಕಾರಿಗಳು ಹಾಗು ಭಕ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌